Murder Case Image of murder symbol

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೋಟಿ ಗ್ರಾಮದ ರೈತರ ಜಮೀನಿನಲ್ಲಿ ಅಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನನ್ನು ಬುಧವಾರ ಕೊಲೆ (Murder) ಮಾಡಲಾಗಿದೆ.

ಹೊಸಕೋಟೆ ಗ್ರಾಮದ ಪ್ರತಿಷ್ಠಿತ ಕುಟುಂಬದ ಹಿರಿಯ ಬಸನಗೌಡ ಪಾಟೀಲ(75)ಕೊಲೆ ಆಗಿರುವ ವೃದ್ಧ. ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ವಾಲಿಕಾರ, ಲಕ್ಷ್ಮಣ ವಾಲಿಕಾರ ಹಾಗೂ ಬಾಳಪ್ಪ ವಾಲಿಕಾರ ಎನ್ನುವ ಬಸನಗೌಡ ಪಾಟೀಲ ಮೂವರು ಸಹೋದರರನ್ನು ಕೆರೂರ ಪೊಲೀಸರು ಬಂಧಿಸಿದ್ದಾರೆ.

ಏನಿದು ಆಸ್ತಿ ವಿವಾದ?

ಮೃತ ಬಸನಗೌಡ ಪಾಟೀಲ ಅವರ ಹಿರಿಯರಿಂದ ಬಂಧಿತ ಆರೋಪಿಗಳ ಹಿರಿಯರು 1977ರಲ್ಲಿ 14 ಎಕರೆ ಜಮೀನು ಖರೀದಿ ಮಾಡಿದ್ದರಂತೆ. ಮಾಲೀಕತ್ವ ಮಾತ್ರ ಖರೀದಿ ಮಾಡಿದವರ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ. ಆರ್‌ಟಿಸಿಯಲ್ಲಿ ಕೊಲೆಯಾಗಿರುವ ಬಸನಗೌಡ ಅವರ ಸಹೋದರಿ ಹೆಸರು ಇದೆ. ಅವರು ವಿದೇಶದಲ್ಲಿ ಇದ್ದು, ಬಹಳ ದಿನಗಳಿಂದ ಇಲ್ಲಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಆದರೆ, ಜಮೀನಿನಲ್ಲಿ ಕೊಲೆ ಆರೋಪಿಗಳು ಸಾಗುವಳಿ ಮಾಡುತ್ತ ಬಂದಿದ್ದರು. ಹತ್ತಿರದಲ್ಲಿ ಬಸನಗೌಡ ಪಾಟೀಲ ಅವರಿಗೆ ಸೇರಿದ ಜಮೀನು ಇದೆ. ತಮ್ಮ ಹಿರಿಯರು ಖರೀದಿ ಮಾಡಿರುವ ಜಮೀನು ಮಾಲೀಕತ್ವ ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಅವರನ್ನು ಕೇಳುತ್ತಿದ್ದರು. ಸಹೋದರಿ ವಿದೇಶದಿಂದ ಬಂದ ಮೇಲೆ ಮಾಡಿಸಿಕೊಡುವುದಾಗಿ ಹೇಳುತ್ತಲೇ ಬಂದಿದ್ದರು. ಅದು ಈವರೆಗೂ ಆಗಿರಲಿಲ್ಲ.

ಸೋಮವಾರ ಮೂವರು ಸಹೋದರರು ಹೊಲದಲ್ಲಿ ಇದ್ದಾಗ ಅವರ ಪಕ್ಕದ ಜಮೀನಿಗೆ ಬಸನಗೌಡ ಪಾಟೀಲ ಬಂದಿದ್ದಾರೆ. ಅವರನ್ನು ನೋಡಿ, ಜಮೀನು ತಮ್ಮ ಹೆಸರಿಗೆ ಯಾವಾಗ ಮಾಡಿಸಿಕೊಡುತ್ತೀರಿ. ಬರೀ ಹೇಳುವುದೇ ಆಯಿತು ಎಂದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಅದು ಕೊನೆಗೆ ವಿಕೋಪಕ್ಕೆ ತಿರುಗಿ ಮೂವರು ಸಹೋದರರು ಸೇರಿ ವೃದ್ಧನಿಗೆ ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಧಿತ ಆರೋಪಿಗಳು ಕಾಡರಕೊಪ್ಪ ಗ್ರಾಮದವರಾಗಿವು ಬಸನಗೌಡ ಅವರು ಹೊಸಕೋಟೆ ಗ್ರಾಮದವರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಹೊಸಕೋಟೆ ವ್ಯಾಪ್ತಿಯ ಜಮೀನಿನಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 1977ರಲ್ಲಿ ನಡೆದಿದ್ದ ಜಮೀನು ಖರೀದಿ ಬಳಿಕ ಮಾಲೀಕತ್ವ ಈ ವರೆಗೂ ಬದಲಾಗಿರಲಿಲ್ಲ. ಅದನ್ನು ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಹೇಳಿದ್ದು, ಬುಧವಾರ ಇದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್