ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಮುದ್ದೇಬಿಹಾಳ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್ ನೀಡಲು ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ಕಠಿಣ ಮಾನದಂಡಗಳನ್ನು ಸರಳೀಕರಣಗೊಳಿಸಬೇಕು. ಪತ್ರಕರ್ತರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ಪ್ರಮುಖ ೧೨ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಡಿ.೧೫ ರಂದು ಬೆಳಗಾವಿಯ ವಿಧಾನಸೌಧದ ಎದುರಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲ್ಲೂಕು ಅಧ್ಯಕ್ಷ ಶಂಕರ ಈ.ಹೆಬ್ಬಾಳ ,ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ೧೬ ಸಾವಿರ ಪತ್ರಕರ್ತರಿಗೆ ಸರ್ಕಾರ ಉಚಿತವಾಗಿ ಸಂಚರಿಸುವುದಕ್ಕೆ ಬಸ್ ಪಾಸ್ ನೀಡಲು ನಡೆಸಿದ ಹೋರಾಟದ ಫಲವಾಗಿ ವಾರ್ತಾ ಇಲಾಖೆ ಕಠಿಣ ನಿಯಮಗಳನ್ನು ರೂಪಿಸಿದ್ದು ತಾಲ್ಲೂಕು ಮಟ್ಟದ ಯಾವೊಬ್ಬ ಪತ್ರಕರ್ತರಿಗೂ ಬಸ್ ಪಾಸ್ ದೊರೆಯುವುದು ಗಗನ ಕುಸುಮವಾಗಿದೆ.ಈ ನಿಟ್ಟಿನಲ್ಲಿ ಬಸ್ ಪಾಸ್‌ಗೆ ವಿಧಿಸಿರುವ ಕಠಿಣ ಷರತ್ತುಗಳನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪಿಆರ್.ಜಿ.ಐ ಹಾಗೂ ಆರ್.ಎನ್.ಐ. ಹೊಂದಿರುವ ಪತ್ರಕರ್ತರಿಗೆ ವಿಕಾಸ ಸೌಧ,ವಿಧಾನಸೌಧಕ್ಕೆ ಪ್ರವೇಶಿಸಲು ಮುಕ್ತ ಅವಕಾಶ ನೀಡಬೇಕು, ಜಿಲ್ಲಾ ವ್ಯಾಪ್ತಿಯಲ್ಲಿರುವ ಪತ್ರಿಕಾ ಭವನಗಳನ್ನು ಯಾವೊಂದು ಪತ್ರಿಕಾ ಸಂಘಟನೆಗಳಿಗೆ ನೀಡದೇ ಆಯಾ ಜಿಲ್ಲಾಧಿಕಾರಿಗಳ ಸುಪರ್ದಿಯಲ್ಲಿ ವಾರ್ತಾ ಇಲಾಖೆಯ ಅಧಿಕಾರಿಗಳ ಮೂಲಕ ನಿರ್ವಹಣೆಗೆ ಆದೇಶಿಸಬೇಕು.ವಾರ್ತಾ ಇಲಾಖೆಯಲ್ಲಿ ಖಾಲಿ ಇರುವ ೩೦೦ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಬೇಕು.ಪತ್ರಕರ್ತರಿಗೆ ಜೀವ ವಿಮೆ ಸೌಲಭ್ಯ ಸರ್ಕಾರ ಒದಗಿಸಬೇಕು.ಕೆಲವು ಪೊಲೀಸರಿಂದ ಪತ್ರಕರ್ತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು.ಪತ್ರಕರ್ತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.ಪತ್ರಕರ್ತರು ಕರ್ತವ್ಯದ ಸಮಯದಲ್ಲಿ ಅಪಘಾತ,ಸಹಜವಾಗಿ ಮೃತಪಟ್ಟರೆ ಅವರ ಅವಲಂಬಿತರಿಗೆ ೧೦ ಲಕ್ಷ ರೂ.ಪರಿಹಾರ ನೀಡಬೇಕು.ವಾರ,ಪಾಕ್ಷಿಕ,ಮಾಸ ಹಾಗೂ ಇನ್ನೀತರ ಪತ್ರಿಕೆಗಳ ಪ್ರತಿನಿಧಿಗಳು ಮಾಶಾಸನ ಪಡೆಯಲು ಅರ್ಹತೆ ಹೊಂದಿರುವುದಿಲ್ಲವೆAದು ವಾರ್ತಾ ಇಲಾಖೆ ಹೊರಡಿಸಿರುವ ಅವೈಜ್ಞಾನಿಕ ನಿಬಂಧನೆ ಕೈ ಬಿಡಬೇಕು.ಪತ್ರಕರ್ತರಿಗೆ ಉಚಿತ ಟೋಲ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದ್ದು ರಾಜ್ಯದ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ