One police constable is enough to arrest Kumaraswamy.. CM hits back at HDK

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Join Our Telegram: https://t.me/dcgkannada

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ‌, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನು ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು.

ಆದರೆ, ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.
ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Latest News

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು

ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಯುಗಾದಿ ಹಬ್ಬದ ನಿಮಿತ್ಯ ತಾಲೂಕಿನ ಖಿಲಾರಹಟ್ಟಿ ಗ್ರಾಮದ ಕಾಡಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮುದ್ದೇಬಿಹಾಳ : ತಾಲ್ಲೂಕಿನ ಬೈಲಕೂರ ಗ್ರಾಮದ ಬೈಲಾದ್ರೇಶ್ವರ ಜಾತ್ರಾ ಮಹೋತ್ಸವ ಮಾ.19 ರಿಂದ 21ರವರೆಗೆ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ ಹಾಗೂ ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 16ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವಿಜಯಪುರ ಜಿಲ್ಲಾಧ್ಯಕ್ಷರು,ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜ, ನಿವೃತ್ತ ಐಎಎಸ್ ಅಧಿಕಾರಿ ಸಿ.ಸೋಮಶೇಖರ್, ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ ಸಂಸ್ಥೆಗಳನ್ನು ಬೆಳೆಸುವುದು ದೊಡ್ಡ ಮಾತಲ್ಲ.ಆದರೆ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿ ಅಲ್ಲಿ ಮಕ್ಕಳಿಗೆ ಶಿಕ್ಷಣವೇ ಪ್ರಧಾನವಾಗಿ ಕೊಡುವ ಸಂಸ್ಥೆಗಳನ್ನು ಬೆಳೆಸುವುದು ಸಾಹಸದ ಕಾರ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಹೇಳಿದರು. ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ