One police constable is enough to arrest Kumaraswamy.. CM hits back at HDK

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Join Our Telegram: https://t.me/dcgkannada

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ‌, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನು ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು.

ಆದರೆ, ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.
ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ