One police constable is enough to arrest Kumaraswamy.. CM hits back at HDK

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Join Our Telegram: https://t.me/dcgkannada

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ‌, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನು ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು.

ಆದರೆ, ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.
ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Latest News

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ