One police constable is enough to arrest Kumaraswamy.. CM hits back at HDK

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Join Our Telegram: https://t.me/dcgkannada

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ‌, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನು ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು.

ಆದರೆ, ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.
ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ