One police constable is enough to arrest Kumaraswamy.. CM hits back at HDK

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Join Our Telegram: https://t.me/dcgkannada

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ‌, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನು ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು.

ಆದರೆ, ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.
ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Latest News

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ ಯಲಗೂರಿನ ಗೋಶಾಲೆಗೆ ಇಲ್ಲಿನ ಹಿಂದೂ ಸಮಾಜದ ಬಾಂಧವರು ಐದು ಟ್ರಾö್ಯಕ್ಟರ್‌ನಷ್ಟು ಮೇವು ಕಾಣಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪಟ್ಟಣದ ಹನುಮಾನ ದೇವಸ್ಥಾನದಲ್ಲಿ ಬುಧವಾರ ಸಂಜೆ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಲಗೂರ ಗೋಶಾಲೆ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಇದೇ ಮೊದಲ ಬಾರಿಗೆ ಮುದ್ದೇಬಿಹಾಳದ ಹಿಂದೂ ಸಮಾಜದವರು

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ. ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ