One police constable is enough to arrest Kumaraswamy.. CM hits back at HDK

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Join Our Telegram: https://t.me/dcgkannada

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ‌, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನು ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು.

ಆದರೆ, ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.
ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ