One police constable is enough to arrest Kumaraswamy.. CM hits back at HDK

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Join Our Telegram: https://t.me/dcgkannada

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ‌, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನು ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು.

ಆದರೆ, ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.
ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Latest News

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ