One police constable is enough to arrest Kumaraswamy.. CM hits back at HDK

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Join Our Telegram: https://t.me/dcgkannada

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ‌, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನು ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು.

ಆದರೆ, ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.
ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Latest News

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ ವರ್ಷವೂ 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮೊದಲಿಗಳಾಗಿ ಹೊರಹೊಮ್ಮಿದ್ದು ಶಾಲೆ ಹಾಗೂ ತನ್ನನ್ನು ಹೆತ್ತವರ ಕೀರ್ತಿ ತಂದಿದ್ದಾಳೆ.ಹುನಗುಂದ ತಾಲ್ಲೂಕಿನ ನಿವೃತ್ತ ಶಿಕ್ಷಕ ಬಸವರಾಜ ಕಂದಕೂರ ಹಾಗೂ ಇಲಕಲ್ ಶಿಕ್ಷಣದ ಇಲಾಖೆಯಲ್ಲಿ ಸಿಆರ್‌ಪಿ ಆಗಿ ಸೇವೆ ಸಲ್ಲಿಸುತ್ತಿರುವ ಗಿರಿಜಾ ಕಂದಕೂರ ಅವರ ಪುತ್ರಿ ಸೌಜನ್ಯಾ ಕಂದಕೂರ 625 ಅಂಕಗಳನ್ನು ಪಡೆದುಕೊಂಡು ಅದ್ವಿತೀಯ ಸಾಧನೆ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ