Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

Ad
Ad

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು