Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ