Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು