Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ