Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ;                        ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ ಜಯಂತಿ ಆಚರಿಸಲಾಯಿತು. ಶಿಕ್ಷಕ ,ಮಕ್ಕಳ ಸಾಹಿತಿ ಸಿದ್ಧನಗೌಡ ಬಿಜ್ಜೂರ ಸರ್ವಜ್ಞಕವಿಯ ಜೀವನ ಮತ್ತು ಬೋಧನೆಗಳ ಕುರಿತು ಅವರ ವಚನಗಳ ಕುರಿತು ಉಪನ್ಯಾಸ ನೀಡಿದರು. ಸಹಶಿಕ್ಷಕರಾದ ಎಚ್.ಬಿ.ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರುಮಾತೆ ಶಾರದಾ ಆಡಗಲ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಬಸವರಾಜ ಬ್ಯಾಲ್ಯಾಳ, ಸದಸ್ಯ ಶಿವಲಿಂಗ ಮುರಾಳ, ಶಿಕ್ಷಕಿಯರಾದ ಶಿಲ್ಪಾ ಸಂಗಮ, ಸುಮಲತಾ ಕೆಂಚನಗುಡ್ಡ

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಪದಿ ಕವಿ, ಸರ್ವಜ್ಞರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಲೋಕಕ್ಕೆ ಸರ್ವಜ್ಞರ ಕೊಡುಗೆ ಅಪಾರ