Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈಗಿರುವ ಸಮಯದ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಿಗ್ಗೆ 8 ರಿಂದ ಮದ್ಯಾಹ್ನ 1.30ಕ್ಕೆ ಬದಲಾಯಿಸಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ