Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.