Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸನ್ಮಾನಿಸಿದರು. ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾದ್ಯಕ್ಷ ಗೋಪಾಲ ಹೂಗಾರ, ಸಿಆರ್‌ಪಿ ಜಿ.ಎಚ್.ಚವ್ಹಾಣ,ಸಂತ ಕನಕದಾಸ ಶಾಲೆಯ ಮುಖ್ಯಗುರು ಎಮ್.ಎನ್.ಯರಝರಿ, ಆರ್.ಎಸ್.ವಾಲೀಕಾರ,ಆರ್.ವಾಯ್.ಪಾಟೀಲ, ,ಎಮ್.ಸಿ.ಕಬಾಡೆ, ಶಂಕರ ಭಾರತಿ ಶಾಲೆಯ ಎಮ್.ಎಮ್.ಮಸ್ಕಿ, ಜ್ಞಾನ ಗಂಗೋತ್ರಿ ಶಾಲೆಯ ಎಂ.ಬಿ.ನದಾಫ, ತಂಗಡಗಿಯ ಚರಲಿಂಗೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎಲ್.ಮಾದರ , ಸಂಜೀವ ಜಾಲವಾದಿ ಉಪಸ್ಥಿತರಿದ್ದರು.