Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ