Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್