Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ