Open welcome for investment from Singapore entrepreneurs in Karnataka: Minister MB Patil

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ (FDI) ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಮ್ಮನ್ನು ಇಲ್ಲಿ ಸೋಮವಾರ ಭೇಟಿಯಾದ `ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ಫೆಡರೇಶನ್ನಿನ ಉಪಾಧ್ಯಕ್ಷ ಪ್ರಸೂನ್ ಮುಖರ್ಜಿ ಈ ನಿಯೋಗದ ನೇತೃತ್ವ ವಹಿಸಿದ್ದರು.

ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ `ಜಾಗತಿಕ ಹೂಡಿಕೆದಾರರ ಸಮಾವೇಶ’ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಶನ್ನಿನ ಸದಸ್ಯರು, ಬೆಂಗಳೂರಿನಲ್ಲಿ `ಸಿಂಗಪುರ ಬಿಜಿನೆಸ್ ಫೆಡರೇಶನ್’ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ನಿಯೋಗದಲ್ಲಿ ಹೆಸರಾಂತ ಉದ್ಯಮಿಗಳಾದ ಜೆಫ್ರಿ ಗುವೋ, ಡಗ್ಲಾಸ್ ಟ್ಯಾನ್, ಸಮಂತಾ ಟಿಯೋ, ಚೆನ್ ಚಿಯೋಂಗ್, ಮಾರ್ಕಸ್ ಸಿಯಾ, ಪಪ್ಪು ಮಿಲಿಂದ್ ಸುರೇಶ್, ಎಸ್ ಮಹೇಂದ್ರನ್, ಜೆಫ್ರಿ ಕಾಂಗ್ ಮತ್ತು ಶಂಭುನಾಥ್ ರೇ ಇದ್ದರು. ರಾಜ್ಯ ಸರಕಾರದ ಪರವಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ