Opening of village deity fair: Five days of continuous Dasoha service is appreciated everywhere

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮಂಗಳವಾರ ಸಂಜೆ ತೆರೆ ಬಿದ್ದಿತು.

5 ದಿನಗಳವರೆಗೆ ಜರುಗಿದ ಈ ಜಾತ್ರೋತ್ಸವಲ್ಲಿ ದ್ಯಾಮವ್ವನ ಕಟ್ಟೆಯಲ್ಲಿ ಶಾರದಾ ದೇವಿ, ಮಧ್ಯೆದಲ್ಲಿ ಗ್ರಾಮದೇವತೆ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಾಡಿನ ವಿವಿಧ ಕಡೆಗಳಿಂದ ಬಂದ ಲಕ್ಷಾಂತರ ಭಕ್ತರು ತಮ್ಮ ಭಕ್ತಿ ಸಮರ್ಪಿಸಿ ಧನ್ಯತೆ ಮೆರೆದರು.

ಮಂಗಲೋತ್ಸವ ದಿನದಂದು ಶಾರದಾದೇವಿ ಹಾಗೂ ಗ್ರಾಮದೇವತೆಯ ಮೂರ್ತಿಗಳನ್ನು ವಾದ್ಯ ವೈಭವಗಳೊಂದಿಗೆ ಮೆರವಣಿಗೆ ನಡೆಸಿ ಮೂಲ ಸ್ಥಳಕ್ಕೆ ಕಳಿಸಿಕೊಡಲಾಯಿತು.

ಮೆಚ್ಚುಗೆಗೆ ಪಾತ್ರವಾದ ದಾಸೋಹ ಸೇವೆ: ನೂರಾರು ಗಣ್ಯರು ಪ್ರಸಾದ ಸೇವೆಗೆ ಹೆಚ್ಚಿನ ದೇಣಿಗೆ ನೀಡಿದ ಕಾರಣದಿಂದ ಐದು ದಿನಗಳವರೆಗೆ ನಿರಂತರವಾಗಿ ಬೆಳಗ್ಗೆ 10 ರಿಂದ ರಾತ್ರಿ 10ರವರೆಗೆ ಪ್ರಸಾದದ ವ್ಯವಸ್ಥೆ ಮಾಡಿದ್ದು ಗಮನ ಸೆಳೆಯಿತು.ದಿನವೂ ಬೇರೆ ಬೇರೆ ಪದಾರ್ಥಗಳನ್ನು ಮಾಡುವ ಮೂಲಕ ಲಕ್ಷಾಂತರ ಭಕ್ತರು ಪ್ರಸಾದ ಸ್ವೀಕರಿಸಿದರು.

ಇದಲ್ಲದೇ ಹುಡ್ಕೋದ ಗವಿಸಿದ್ದೇಶ್ವರ ವೇದಿಕೆಯಲ್ಲಿ, ಬಿಡಿಒ ಕ್ವಾರ್ಟರ್ಸ್ನಲ್ಲಿ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ರಂಜಿಸಿದವು. ಇಡೀ ಊರಿನ ತುಂಬೆಲ್ಲಾ ಲೈಟಿನ ಅಲಂಕಾರ ಜಾತ್ರೆಯ ಕಳೆಯನ್ನು ಇಮ್ಮಡಿಸಿತ್ತು. ಜಾತ್ರಾ ಕಮೀಟಿಯವರು ಕೈಗೊಂಡ ಸಂಘಟಿತ ಹಾಗೂ ವ್ಯವಸ್ಥಿತ ಯೋಜನೆಗಳಿಂದ ಜಾತ್ರೆ ಅದ್ದೂರಿಯಾಗಿ ಜರುಗಿದ್ದು ಹಿಂದೂ ಮುಸ್ಲಿಂ ಬಾಂಧವರ ಭಾವೈಕ್ಯತೆಗೆ ಸಾಕ್ಷಿಯಾಯಿತು. ಪೊಲೀಸ್ ಇಲಾಖೆಯವರು ಕೈಗೊಂಡ ಭದ್ರತೆ, ಟ್ರಾಫಿಕ್ ನಿಯಂತ್ರಣ ಕ್ರಮಗಳು, ಮಾಜಿ ಸೈನಿಕರ ಸೇವೆಯನ್ನು ಜಾತ್ರೆಯಲ್ಲಿ ಸಮಸ್ಯೆ ಕಂಡು ಬರದಂತೆ ಆಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ