Opposition to the implementation of the Vakbh Amendment-2025 Act

ವಕ್ಭ್ ತಿದ್ದುಪಡಿ-2025ರ ಕಾಯ್ದೆ ಅನುಷ್ಠಾನಕ್ಕೆ ವಿರೋಧ

ವಕ್ಭ್ ತಿದ್ದುಪಡಿ-2025ರ ಕಾಯ್ದೆ ಅನುಷ್ಠಾನಕ್ಕೆ ವಿರೋಧ

ಮುದ್ದೇಬಿಹಾಳ : ಕೇಂದ್ರ ಸರ್ಕಾರ ವಕ್ಭ್ ಕಾಯ್ದೆಗೆ ತಿದ್ದುಪಡಿ-2025ರ ಅನುಷ್ಠಾನಕ್ಕೆ ನಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸುತ್ತೇವೆ ಎಂದು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಪ್ರತಿನಿಧಿಗಳು ಹೇಳಿದರು.

ಪಟ್ಟಣದಲ್ಲಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್, ಜಮಾಅತೆ ಇಸ್ಲಾಮಿ ಹಿಂದ್ ಹಾಗೂ ಸ್ಥಳೀಯ ಮುಸ್ಲಿಂ ಸಮಾಜದ ಮಹಿಳೆಯರು ವಕ್ಭ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆ ಅಧ್ಯಕ್ಷೆ ಸುಮಯ್ಯ ಖಾನ್, ಇಸ್ಲಾಂ ಹೊರಗಿನ ಸದಸ್ಯರ ಸೇರ್ಪಡೆಯಿಂದ ಸಂಸ್ಥೆಗಳ ಧಾರ್ಮಿಕ ಸ್ವಾತಂತ್ರ್ಯವನ್ನು ಹಾಳು ಮಾಡುವುದು ಇದರ ಹಿಂದಿನ ಕುತಂತ್ರ ಅಡಗಿದೆ. ವಕ್ಭ್ ಬೋರ್ಡ್ನಿಂದ ಸರ್ಕಾರದ ಕೈಗೆ ವಕ್ಭ್ ಆಸ್ತಿಗಳನ್ನು ಘೋಷಿಸುವ ಅಧಿಕಾರ ವರ್ಗಾಯಿಸುತ್ತದೆ. 1995ರ ಕಾಯ್ದೆ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿದ್ದು ಹೊಸ ತಿದ್ದುಪಡಿ ಕಾಯ್ದೆಯಲ್ಲಿ ನಿಖರವಾದ ಪ್ರಾತಿನಿಧ್ಯ ನೀಡುವುದಿಲ್ಲ ಎಂದು ಹೇಳಿದರು.

ಈ ಕಾಯ್ದೆಯ ಕುರಿತು ಶಾಸಕರು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ರದ್ದುಗೊಳಿಸುವಂತೆ ಒತ್ತಾಯಿಸಬೇಕು. ಸಮುದಾಯದ ಸಮಾಲೋಚನೆಯಿಲ್ಲದೆ ಈ ಕಾಯಿದೆಯ ಸ್ಥಳೀಯ ಅನುಷ್ಠಾನ ಮಾಡಬಾರದು. ತಾಲ್ಲೂಕು ಅಧಿಕಾರಿಗಳು ಶಾಂತಿಯುತ ಜಾಗೃತಿ ಕಾರ್ಯಕ್ರಮ ಹಾಗೂ ಕಾನೂನು ಕಾರ್ಯಾಗಾರಗಳಿಗೆ ಸಹಕಾರ ನೀಡಬೇಕು. ಜಿಲ್ಲಾ ವಕ್ಫ್ ಅಧಿಕಾರಿ ನೊಂದಾಯಿಸಲ್ಪಡದೇ ಇರುವ ವಕ್ಫ್ ಆಸ್ತಿಗಳ ಪರಿಶೀಲನೆ ಹಾಗೂ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ತಹಸೀಲ್ದಾರ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಪ್ರಭಾರಿ ತಹಸೀಲ್ದಾರ್ ಎ. ಡಿ. ಅಮರವಾದಗಿ ಮನವಿ ಸ್ವೀಕರಿಸಿದರು. ಜಮಾಅತೆ ಇಸ್ಲಾಮಿ ಹಿಂದ ಸಂಚಾಲಕ ನೂರೇನಬಿ ನದಾಫ, ಸದ್ದಾಂಹುಸೇನ ನದಾಫ, ಪ್ರಮುಖರಾದ ಮುಸರತ್ ನದಾಫ, ರಜಿಯಾ ಅಬಾಲೆ, ನಜಮಾ ಘಾಟಿ, ಆಫ್ರಿನ ಮೋಮಿನ, ಸಾನಿಯಾ ಬಾಗಲಕೋಟೆ, ಹಲೀಮಾ ಮಕಾನದಾರ, ಶಗುಪ್ತಾ ದಫೆದಾರ, ಸಬಾ ಶಿರಗುಂಪಿ, ಕುಲ್ಸುಮ್ ಖಾನ್, ಬಿಸ್ಮಿಲ್ಲಾ ನದಾಫ್, ಯಾಸ್ಮಿನ್ ಎಲಿಗಾರ್ ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು