Opposition to the implementation of the Vakbh Amendment-2025 Act

ವಕ್ಭ್ ತಿದ್ದುಪಡಿ-2025ರ ಕಾಯ್ದೆ ಅನುಷ್ಠಾನಕ್ಕೆ ವಿರೋಧ

ವಕ್ಭ್ ತಿದ್ದುಪಡಿ-2025ರ ಕಾಯ್ದೆ ಅನುಷ್ಠಾನಕ್ಕೆ ವಿರೋಧ

ಮುದ್ದೇಬಿಹಾಳ : ಕೇಂದ್ರ ಸರ್ಕಾರ ವಕ್ಭ್ ಕಾಯ್ದೆಗೆ ತಿದ್ದುಪಡಿ-2025ರ ಅನುಷ್ಠಾನಕ್ಕೆ ನಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸುತ್ತೇವೆ ಎಂದು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಪ್ರತಿನಿಧಿಗಳು ಹೇಳಿದರು.

ಪಟ್ಟಣದಲ್ಲಿ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಶನ್, ಜಮಾಅತೆ ಇಸ್ಲಾಮಿ ಹಿಂದ್ ಹಾಗೂ ಸ್ಥಳೀಯ ಮುಸ್ಲಿಂ ಸಮಾಜದ ಮಹಿಳೆಯರು ವಕ್ಭ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆ ಅಧ್ಯಕ್ಷೆ ಸುಮಯ್ಯ ಖಾನ್, ಇಸ್ಲಾಂ ಹೊರಗಿನ ಸದಸ್ಯರ ಸೇರ್ಪಡೆಯಿಂದ ಸಂಸ್ಥೆಗಳ ಧಾರ್ಮಿಕ ಸ್ವಾತಂತ್ರ್ಯವನ್ನು ಹಾಳು ಮಾಡುವುದು ಇದರ ಹಿಂದಿನ ಕುತಂತ್ರ ಅಡಗಿದೆ. ವಕ್ಭ್ ಬೋರ್ಡ್ನಿಂದ ಸರ್ಕಾರದ ಕೈಗೆ ವಕ್ಭ್ ಆಸ್ತಿಗಳನ್ನು ಘೋಷಿಸುವ ಅಧಿಕಾರ ವರ್ಗಾಯಿಸುತ್ತದೆ. 1995ರ ಕಾಯ್ದೆ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿದ್ದು ಹೊಸ ತಿದ್ದುಪಡಿ ಕಾಯ್ದೆಯಲ್ಲಿ ನಿಖರವಾದ ಪ್ರಾತಿನಿಧ್ಯ ನೀಡುವುದಿಲ್ಲ ಎಂದು ಹೇಳಿದರು.

ಈ ಕಾಯ್ದೆಯ ಕುರಿತು ಶಾಸಕರು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ರದ್ದುಗೊಳಿಸುವಂತೆ ಒತ್ತಾಯಿಸಬೇಕು. ಸಮುದಾಯದ ಸಮಾಲೋಚನೆಯಿಲ್ಲದೆ ಈ ಕಾಯಿದೆಯ ಸ್ಥಳೀಯ ಅನುಷ್ಠಾನ ಮಾಡಬಾರದು. ತಾಲ್ಲೂಕು ಅಧಿಕಾರಿಗಳು ಶಾಂತಿಯುತ ಜಾಗೃತಿ ಕಾರ್ಯಕ್ರಮ ಹಾಗೂ ಕಾನೂನು ಕಾರ್ಯಾಗಾರಗಳಿಗೆ ಸಹಕಾರ ನೀಡಬೇಕು. ಜಿಲ್ಲಾ ವಕ್ಫ್ ಅಧಿಕಾರಿ ನೊಂದಾಯಿಸಲ್ಪಡದೇ ಇರುವ ವಕ್ಫ್ ಆಸ್ತಿಗಳ ಪರಿಶೀಲನೆ ಹಾಗೂ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ತಹಸೀಲ್ದಾರ್‌ಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಪ್ರಭಾರಿ ತಹಸೀಲ್ದಾರ್ ಎ. ಡಿ. ಅಮರವಾದಗಿ ಮನವಿ ಸ್ವೀಕರಿಸಿದರು. ಜಮಾಅತೆ ಇಸ್ಲಾಮಿ ಹಿಂದ ಸಂಚಾಲಕ ನೂರೇನಬಿ ನದಾಫ, ಸದ್ದಾಂಹುಸೇನ ನದಾಫ, ಪ್ರಮುಖರಾದ ಮುಸರತ್ ನದಾಫ, ರಜಿಯಾ ಅಬಾಲೆ, ನಜಮಾ ಘಾಟಿ, ಆಫ್ರಿನ ಮೋಮಿನ, ಸಾನಿಯಾ ಬಾಗಲಕೋಟೆ, ಹಲೀಮಾ ಮಕಾನದಾರ, ಶಗುಪ್ತಾ ದಫೆದಾರ, ಸಬಾ ಶಿರಗುಂಪಿ, ಕುಲ್ಸುಮ್ ಖಾನ್, ಬಿಸ್ಮಿಲ್ಲಾ ನದಾಫ್, ಯಾಸ್ಮಿನ್ ಎಲಿಗಾರ್ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ