ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ ಜಿಲ್ಲಾ ಆಸ್ಪತ್ರೆಗೆ ಬರೆದುಕೊಡುವುದು ಅನಿವಾರ್ಯವಾಗುತ್ತದೆ.ಇಂತಹ ಸಮಯದಲ್ಲಿ ನಾಗರಿಕರು ಆರೋಗ್ಯ ಇಲಾಖೆ ವೈದ್ಯರು,ಸಿಬ್ಬಂದಿಯೊAದಿಗೆ ಸಂಯಮದಿAದ ನಡೆದುಕೊಳ್ಳಬೇಕು ಎಂದು ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆರೋಗ್ಯ ರಕ್ಷಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಮೊದಲಿನಂತೆ ಈಗ ವೈದ್ಯಕೀಯ ಸೇವೆ ಅಷ್ಟೊಂದು ಸುಲಭದ್ದಾಗಿಲ್ಲ.ಆದರೆ ಸರ್ಕಾರ ಒದಗಿಸಿರುವ ಸೌಲಭ್ಯಗಳಿಂದ ಜನರಿಗೆ ಉತ್ತಮ ಸೇವೆ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ, ಅತ್ಯಂತ ಕ್ರಿಯಾಶೀಲ ಹಾಗೂ ಪ್ರಸೂತಿ ವಿಭಾಗದಲ್ಲಿ ಉತ್ತಮ ಹೆಸರು ಮಾಡಿರುವ ಡಾ.ರಂಗನಾಥ ಅವರು ನಮ್ಮ ಆಸ್ಪತ್ರೆಗೆ ಆಗಮಿಸಿರುವುದು ಸಂತಸದ ಸಂಗತಿಯಾಗಿದ್ದು ಬಡವರಿಗೆ ಒಳ್ಳೆಯ ಸೇವೆ ನೀಡಲು ಮತ್ತಷ್ಟು ಶ್ರಮಿಸುತ್ತೇವೆ ಎಂದರು.

ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಡಾ.ವಿಜಯಕುಮಾರ ಗೂಳಿ ಮಾತನಾಡಿ,ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಏನೆಲ್ಲಾ ಸೇವೆ ಲಭ್ಯವಿದೆಯೋ ಅದನ್ನು ಒದಗಿಸುವುದಕ್ಕೆ ಆರೋಗ್ಯ ಇಲಾಖೆಯೊಂದಿಗೆ ನಾವೆಲ್ಲ ಕೈಜೋಡಿಸುತ್ತೇವೆ.ಇನ್ನೂ ಅಗತ್ಯವಿರುವ ಅನುದಾನವನ್ನು ಶಾಸಕರ ಗಮನಕ್ಕೆ ತಂದು ಒದಗಿಸಲು ಪ್ರಯತ್ನಿಸುತ್ತೇವೆ.ಆದರೆ ಸರ್ಕಾರಿ ಆಸ್ಪತ್ರೆಯ ಹೆಸರು ಒಳ್ಳೆಯ ರೀತಿಯಲ್ಲಿ ಬೆಳೆಸುವ ಜವಾಬ್ದಾರಿ ವೈದ್ಯಕೀಯ ಸಿಬ್ಬಂದಿ ಮೇಲಿದೆ ಎಂದರು.

ಪತ್ರಕರ್ತ ಶಂಕರ ಈ.ಹೆಬ್ಬಾಳ ಮಾತನಾಡಿ, ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಖ್ಯಾತ ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯರವರು ಆಗಮಿಸಿರುವುದು ಬಡ ಮತ್ತು ಮಧ್ಯಮ ವರ್ಗದವರಿಗೆ ತುಂಬಾ ಅನುಕೂಲವಾಗಲಿದೆ.50-60 ಸಾವಿರ ರೂ.ಖಾಸಗಿ ಆಸ್ಪತ್ರೆಗಳಲ್ಲಿ ಹಣ ಕೊಟ್ಟು ಹೆರಿಗೆ ಮಾಡಿಸಿಕೊಂಡು ಬರುವ ಶಕ್ತಿ ಇಲ್ಲದವರಿಗೆ ಮುದ್ದೇಬಿಹಾಳ ಆಸ್ಪತ್ರೆಯ ಪ್ರಸೂತಿ ವಿಭಾಗ ಸಂಜೀವಿನಿಯAತೆ ಕೆಲಸ ಮಾಡಲಿದೆ.ಮುದ್ದೇಬಿಹಾಳದ ಸುತ್ತಮುತ್ತಲಿನ ಜನರು ಹೆರಿಗೆಗಾಗಿ ವಿಜಯಪುರ,ಬಾಗಲಕೋಟೆಗೆ ತೆರಳುವ ಬದಲು ತಾಲ್ಲೂಕು ಆಸ್ಪತ್ರೆಯಲ್ಲಿ ಉತ್ತಮ ಸೇವೆ ಇನ್ನು ಮುಂದೆ ದೊರೆಯುವ ಆಶಾಭಾವನೆ ವ್ಯಕ್ತವಾಗಿದೆ.ಸಾರ್ವಜನಿಕರು ಸರಕಾರಿ ಆಸ್ಪತ್ರೆ ವೈದ್ಯರು,ಸಿಬ್ಬಂದಿಯೊAದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು.ಉತ್ತಮ ವೈದ್ಯರು ಲಭ್ಯವಿದ್ದು ಉತ್ತಮ ಆಸ್ಪತ್ರೆ ಪ್ರಶಸ್ತಿ ಮುದ್ದೇಬಿಹಾಳ ಸಾರ್ವಜನಿಕ ಆಸ್ಪತ್ರೆ ಪಡೆದುಕೊಳ್ಳುವಂತಾಗಲಿ ಎಂದು ಹೇಳಿದರು.

ಡಾ.ಶಿವಾನಂದ ನಾಡಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಕ್ಷತಾ ಚಲವಾದಿ, ರಾಜ್ಯ ಸರ್ಕಾರಿ ನೌಕರ ಸಂಘದ ನಿರ್ದೇಶಕ ವಿಠ್ಠಲ ಕಿಲಾರಟ್ಟಿ, ಶುಶ್ರೂಷಕ ಸಂಘದ ಮುಖಂಡ ಶಿವಣ್ಣ ಮಾಗಿ ಮಾತನಾಡಿದರು. ಆರೋಗ್ಯ ರಕ್ಷಾ ಸಮೀತಿ ನಾಮನಿರ್ದೇಶಿತ ಸದಸ್ಯರಾದ ಶಿವನಗೌಡ ಪಾಟೀಲ, ಮಹ್ಮದರಫೀಕ ಶಿರೋಳ,ಸದು ಮಠ,ಅಂಬರೀಶ ಬಿರಾದಾರ,ಮಾಬೂಬಿ ಬಾಗವಾನ,ಡಾ.ಕೌಸರ,ಇಲಾಖೆ ನೌಕರರರಾದ ಮೊಮ್ಮದರಫಿಕ ಬಾಗವಾನ, ಅಯ್ಯಮ್ಮ ಕೊಣ್ಣೂರ , ಬಸವರಾಜ ಹಾವೇರಿ, ಬಸವರಾಜ ಬಡಿಗೇರ, ಯಲಗೂರೇಶ ತೊನಶ್ಯಾಳ , ರೇಖಾ ಜಾಯಗೊಂಡ, ಸಂತೋಷ ಅಂಗಡಗೇರಿ, ವೀರೇಶ್ ಜಿಂಜಿಗಡ್ಡಿ ,ರಾಜು ರಾಥೋಡ, ಪ್ರವೀಣ್ ಓದಿ, ಬಗಲಿ, ವಿ ವಿ.ಪವಾಡಶೆಟ್ಟಿ ಮಾಂತೇಶ ಹಿರೇಮಠ ಪಾಲ್ಗೊಂಡಿದ್ದರು.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ