ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ ಜಿಲ್ಲಾ ಆಸ್ಪತ್ರೆಗೆ ಬರೆದುಕೊಡುವುದು ಅನಿವಾರ್ಯವಾಗುತ್ತದೆ.ಇಂತಹ ಸಮಯದಲ್ಲಿ ನಾಗರಿಕರು ಆರೋಗ್ಯ ಇಲಾಖೆ ವೈದ್ಯರು,ಸಿಬ್ಬಂದಿಯೊAದಿಗೆ ಸಂಯಮದಿAದ ನಡೆದುಕೊಳ್ಳಬೇಕು ಎಂದು ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆರೋಗ್ಯ ರಕ್ಷಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಮೊದಲಿನಂತೆ ಈಗ ವೈದ್ಯಕೀಯ ಸೇವೆ ಅಷ್ಟೊಂದು ಸುಲಭದ್ದಾಗಿಲ್ಲ.ಆದರೆ ಸರ್ಕಾರ ಒದಗಿಸಿರುವ ಸೌಲಭ್ಯಗಳಿಂದ ಜನರಿಗೆ ಉತ್ತಮ ಸೇವೆ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ, ಅತ್ಯಂತ ಕ್ರಿಯಾಶೀಲ ಹಾಗೂ ಪ್ರಸೂತಿ ವಿಭಾಗದಲ್ಲಿ ಉತ್ತಮ ಹೆಸರು ಮಾಡಿರುವ ಡಾ.ರಂಗನಾಥ ಅವರು ನಮ್ಮ ಆಸ್ಪತ್ರೆಗೆ ಆಗಮಿಸಿರುವುದು ಸಂತಸದ ಸಂಗತಿಯಾಗಿದ್ದು ಬಡವರಿಗೆ ಒಳ್ಳೆಯ ಸೇವೆ ನೀಡಲು ಮತ್ತಷ್ಟು ಶ್ರಮಿಸುತ್ತೇವೆ ಎಂದರು.

ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಡಾ.ವಿಜಯಕುಮಾರ ಗೂಳಿ ಮಾತನಾಡಿ,ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಏನೆಲ್ಲಾ ಸೇವೆ ಲಭ್ಯವಿದೆಯೋ ಅದನ್ನು ಒದಗಿಸುವುದಕ್ಕೆ ಆರೋಗ್ಯ ಇಲಾಖೆಯೊಂದಿಗೆ ನಾವೆಲ್ಲ ಕೈಜೋಡಿಸುತ್ತೇವೆ.ಇನ್ನೂ ಅಗತ್ಯವಿರುವ ಅನುದಾನವನ್ನು ಶಾಸಕರ ಗಮನಕ್ಕೆ ತಂದು ಒದಗಿಸಲು ಪ್ರಯತ್ನಿಸುತ್ತೇವೆ.ಆದರೆ ಸರ್ಕಾರಿ ಆಸ್ಪತ್ರೆಯ ಹೆಸರು ಒಳ್ಳೆಯ ರೀತಿಯಲ್ಲಿ ಬೆಳೆಸುವ ಜವಾಬ್ದಾರಿ ವೈದ್ಯಕೀಯ ಸಿಬ್ಬಂದಿ ಮೇಲಿದೆ ಎಂದರು.

ಪತ್ರಕರ್ತ ಶಂಕರ ಈ.ಹೆಬ್ಬಾಳ ಮಾತನಾಡಿ, ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಖ್ಯಾತ ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯರವರು ಆಗಮಿಸಿರುವುದು ಬಡ ಮತ್ತು ಮಧ್ಯಮ ವರ್ಗದವರಿಗೆ ತುಂಬಾ ಅನುಕೂಲವಾಗಲಿದೆ.50-60 ಸಾವಿರ ರೂ.ಖಾಸಗಿ ಆಸ್ಪತ್ರೆಗಳಲ್ಲಿ ಹಣ ಕೊಟ್ಟು ಹೆರಿಗೆ ಮಾಡಿಸಿಕೊಂಡು ಬರುವ ಶಕ್ತಿ ಇಲ್ಲದವರಿಗೆ ಮುದ್ದೇಬಿಹಾಳ ಆಸ್ಪತ್ರೆಯ ಪ್ರಸೂತಿ ವಿಭಾಗ ಸಂಜೀವಿನಿಯAತೆ ಕೆಲಸ ಮಾಡಲಿದೆ.ಮುದ್ದೇಬಿಹಾಳದ ಸುತ್ತಮುತ್ತಲಿನ ಜನರು ಹೆರಿಗೆಗಾಗಿ ವಿಜಯಪುರ,ಬಾಗಲಕೋಟೆಗೆ ತೆರಳುವ ಬದಲು ತಾಲ್ಲೂಕು ಆಸ್ಪತ್ರೆಯಲ್ಲಿ ಉತ್ತಮ ಸೇವೆ ಇನ್ನು ಮುಂದೆ ದೊರೆಯುವ ಆಶಾಭಾವನೆ ವ್ಯಕ್ತವಾಗಿದೆ.ಸಾರ್ವಜನಿಕರು ಸರಕಾರಿ ಆಸ್ಪತ್ರೆ ವೈದ್ಯರು,ಸಿಬ್ಬಂದಿಯೊAದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು.ಉತ್ತಮ ವೈದ್ಯರು ಲಭ್ಯವಿದ್ದು ಉತ್ತಮ ಆಸ್ಪತ್ರೆ ಪ್ರಶಸ್ತಿ ಮುದ್ದೇಬಿಹಾಳ ಸಾರ್ವಜನಿಕ ಆಸ್ಪತ್ರೆ ಪಡೆದುಕೊಳ್ಳುವಂತಾಗಲಿ ಎಂದು ಹೇಳಿದರು.

ಡಾ.ಶಿವಾನಂದ ನಾಡಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಕ್ಷತಾ ಚಲವಾದಿ, ರಾಜ್ಯ ಸರ್ಕಾರಿ ನೌಕರ ಸಂಘದ ನಿರ್ದೇಶಕ ವಿಠ್ಠಲ ಕಿಲಾರಟ್ಟಿ, ಶುಶ್ರೂಷಕ ಸಂಘದ ಮುಖಂಡ ಶಿವಣ್ಣ ಮಾಗಿ ಮಾತನಾಡಿದರು. ಆರೋಗ್ಯ ರಕ್ಷಾ ಸಮೀತಿ ನಾಮನಿರ್ದೇಶಿತ ಸದಸ್ಯರಾದ ಶಿವನಗೌಡ ಪಾಟೀಲ, ಮಹ್ಮದರಫೀಕ ಶಿರೋಳ,ಸದು ಮಠ,ಅಂಬರೀಶ ಬಿರಾದಾರ,ಮಾಬೂಬಿ ಬಾಗವಾನ,ಡಾ.ಕೌಸರ,ಇಲಾಖೆ ನೌಕರರರಾದ ಮೊಮ್ಮದರಫಿಕ ಬಾಗವಾನ, ಅಯ್ಯಮ್ಮ ಕೊಣ್ಣೂರ , ಬಸವರಾಜ ಹಾವೇರಿ, ಬಸವರಾಜ ಬಡಿಗೇರ, ಯಲಗೂರೇಶ ತೊನಶ್ಯಾಳ , ರೇಖಾ ಜಾಯಗೊಂಡ, ಸಂತೋಷ ಅಂಗಡಗೇರಿ, ವೀರೇಶ್ ಜಿಂಜಿಗಡ್ಡಿ ,ರಾಜು ರಾಥೋಡ, ಪ್ರವೀಣ್ ಓದಿ, ಬಗಲಿ, ವಿ ವಿ.ಪವಾಡಶೆಟ್ಟಿ ಮಾಂತೇಶ ಹಿರೇಮಠ ಪಾಲ್ಗೊಂಡಿದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,