ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್