ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು ವಾಹನಗಳು ಪಲ್ಟಿ ಹೊಡೆದ ಪರಿಣಾಮ ಟೆಂಪೋಟ್ರಾವೆಲ್ಸ್ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನುಳಿದ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಆಲಮಟ್ಟಿ ರಸ್ತೆಯಲ್ಲಿ ಬರುವ ಮಾದಿನಾಳ ಕ್ರಾಸ್‌ನಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಜಟ್ಟಗಿ ತಾಂಡಾದ ನಿವಾಸಿ ಕಸ್ತೂರಿಬಾಯಿ ಕೃಷ್ಣಪ್ಪ ಲಮಾಣಿ(50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.ಟಿಟಿಯಲ್ಲಿ ಪ್ರಯಾಣಿಸುತ್ತಿದ್ದ ಗೆದ್ದಲಮರಿ ತಾಂಡಾದ ಗುರು ರಾಯಪ್ಪ ಲಮಾಣಿ, ಜಟ್ಟಗಿಯ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು