ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಪಾಲಕರು,ವಿದ್ಯಾರ್ಥಿಗಳೇ ನಮ್ಮ ಸಂಸ್ಥೆಯ ಅನ್ನದಾತರು-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಮೇಲಿನ ಪೈಪೋಟಿ ಹೆಚ್ಚಾಗಿದ್ದು, ಆಕ್ಸ್ಫರ್ಡ್ ಸಂಸ್ಥೆಯಲ್ಲಿ ವ್ಯಾಸಂಗ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮೇಲೆ ಹಣ ದುರುಪಯೋಗದ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅವರಿಗೆ ಸರ್ಕಾರ ಕೊಟ್ಟಿರುವ ಸ್ಥಾನಮಾನಗಳನ್ನು ಹಿಂಪಡೆದುಕೊoಡು ತನಿಖೆ ನಡೆಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲ್ಲೂಕು ಘಟಕದಿಂದ ರಾಜ್ಯಪಾಲರು,ಮುಖ್ಯಮಂತ್ರಿಗಳಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಲಾಯಿತು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಪದಾಧಿಕಾರಿಗಳು, ಶಿರಸ್ತೇದಾರ ಎಂ.ಎ.ಬಾಗೇವಾಡಿ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ ಸಂಸ್ಥೆಯಾಗಿದೆ.ಆಯ್ಕೆಯಾಗಿರುವ ಎಲ್ಲ ಸದಸ್ಯರು ಸಮಾಜದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಉದ್ಯಮಿ ಅಯೂಬ್ ಮನಿಯಾರ್ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಹಾಲ್‌ನಲ್ಲಿ ಮಂಗಳವಾರ ಅಂಜುಮನ್ ಹಿತರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಅಂಜುಮನ್ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಸ್ಥೆಗೆ ಯುವ ಉತ್ಸಾಹಿ ಸದಸ್ಯರು ಆಯ್ಕೆಯಾಗಿದ್ದೀರಿ.ಅಂಜುಮನ್ ಸಂಸ್ಥೆಗೆ ಇದ್ದ