ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು ಪಾಲ್ಗೊಳ್ಳುವ ಮೂಲಕ ಗೌರವ ಸಲ್ಲಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎ.ಗಣೇಶ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದೊಡ್ಡ ಶರಣರು,ನಾಯಕರ ಜಯಂತಿ ಕಾರ್ಯಕ್ರಮಗಳಿಗೆ ಅಷ್ಟೇ ಅಧಿಕಾರಿಗಳು ಆದ್ಯತೆ