ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ