ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು