ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಲಿ ಎಂಬ ಸದುದ್ಧೇಶದಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಜ್ಯಾದ್ಯಾಂತ ಜೂ.1 ರಿಂದ ಸರ್ಕಾರಿ ಶಾಲೆಗಳ ಆರಂಭೋತ್ಸವಕ್ಕೆ ಸೂಚನೆ ನೀಡಿದಂತೆ ತಾಲ್ಲೂಕಿನೆಲ್ಲೆಡೆ ವೈಭವದಿಂದ ಶಾಲೆಗಳನ್ನು ಶಿಕ್ಷಕರು ಆರಂಭಿಸಿದ್ದಾರೆ. ಕೆಲವಡೆ ಮಕ್ಕಳಿಗೆ ಸರ್ಕಾರದಿಂದ ಪೂರೈಕೆಯಾಗಿರುವ ಪಠ್ಯಪುಸ್ತಕಗಳು,ಬಟ್ಟೆ ಕೊಟ್ಟು ಸ್ವಾಗತಿಸಿಕೊಂಡರೆ ಇನ್ನು ಕೆಲವೆಡೆ ಶಾಲಾ ಮಕ್ಕಳನ್ನು ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ಊರಿನ ತುಂಬೆಲ್ಲ ಮೆರವಣಿಗೆ ನಡೆಸಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ