ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ