ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಕಾರ್ಯ ಮಾಡುತ್ತಿದೆ ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಎನ್.ಎಸ್.ಪೂಜಾರಿ ಕನ್ಸಟ್ರಕ್ಷನ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಗುರಿಯನ್ನಿಟ್ಟುಕೊಂಡು ನಾವು ಮುದ್ದೇಬಿಹಾಳ,ಕೋಳೂರು ಹಾಗೂ ಅಡವಿ ಹುಲಗಬಾಳದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದೇವೆ. ನಮ್ಮ ಸಂಸ್ಥೆಯಲ್ಲಿ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು ತಗೆಯುವುದು ವಿದ್ಯಾರ್ಥಿಗಳಾದ ನಿಮ್ಮ ಕೈಯ್ಯಲ್ಲಿದೆ.ವಿದ್ಯೆ ಶಿಖರವೇರಿ ಗರ್ವದ ಮೇಲೆ ಕೂರಬಾರದು.ಹಣದಿಂದ ಯಾವುತ್ತೂ ಶಿಕ್ಷಣವನ್ನು ಅಳೆಯಬಾರದು ಎಂದು ಕಕ್ಕೇರಾ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಯ್ಯ ಮಠ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಬೀದರನ