ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ ಮಾಡಿದರು. ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ಶುಕ್ರವಾರ ವಿಶ್ವ ಗುಬ್ಬಚ್ಚಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರು ತಮ್ಮ ಮದುವೆ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು ದೇವರ ಜಾತ್ರಾ ಮಹೋತ್ಸವದಲ್ಲಿ ನೂತನವಾಗಿ ಕರ್ನಾಟಕ ಸರಕಾರದ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಥಳೀಯ ನಿವಾಸಿ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಅವರನ್ನು ಜಾತ್ರಾ ಕಮೀಟಿ ಹಾಗೂ ತಾಂಡಾದ ಹಿರಿಯರು ರಾಜಕೀಯ ಮುಖಂಡರ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ