ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ