ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ