ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

Ad
Ad

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು.

Ad
Ad

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ರಾಘವೇಂದ್ರ ಮಠ, ಹಳೇ ಸರಕಾರಿ ದವಾಖಾನೆ, ದ್ಯಾಮವ್ವನ ಕಟ್ಟೆ, ಮುಖ್ಯರಸ್ತೆ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್(ಬೋರಾವತ್) ಮಾತನಾಡಿ, ಕಾರ್ಯಕರ್ತೆಯರನ್ನು ಕಚೇರಿಯೊಳಕ್ಕೆ ಒಬ್ಬರನ್ನೆ ವಿಚಾರಣೆ ನೆಪದಲ್ಲಿ ಕರೆಯುತ್ತಾರೆ. ರಾತ್ರಿ 9 ಗಂಟೆಗೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಡುತ್ತಾರೆ. ಯಾರು ನೋಡಲು ಸುಂದರವಾಗಿ ಇದ್ದಾರೆಯೋ ಅಂತಹ ಕಾರ್ಯಕರ್ತೆಯರ ಕೇಂದ್ರಕ್ಕೆ ಭೇಟಿ ಕೊಟ್ಟು ತಮ್ಮ ವೇಷಭೂಷಣದ ಬಗ್ಗೆ ಸಲುಗೆಯಿಂದ ಮಾತನಾಡುತ್ತಾರೆ. ಕಾರ್ಯಕರ್ತೆಯರನ್ನು ಕಾಮುಕ ದೃಷ್ಟಿಯಿಂದ ನೋಡುತ್ತಾರೆ ಎಂದು ಆರೋಪಿಸಿದರು.

ಹಿಂದಿನ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿದ್ದಾಗ ಇದೇ ಅಧಿಕಾರಿ ಪ್ರಭಾರಿ ಹುದ್ದೆಯಲ್ಲಿದ್ದರು. ಆಗ ಇಲಾಖೆಯಲ್ಲಿ ಕೆಲವು ಆರೋಪಗಳ ಕುರಿತು ಪತ್ರ ಬರೆದಾಗ ಅವರನ್ನು 24 ತಾಸಿನಲ್ಲಿ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಆದರೆ ಹಾಲಿ ಶಾಸಕರು ನಮ್ಮವರೇ ಇದ್ದರೂ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಮೀನಮೇಷ ಎಣಿಸಲಾಗುತ್ತಿದೆ.ಕಾರ್ಯಕರ್ತೆಯರನ್ನು ಬೆದರಿಸುವ ಕೆಲಸ ನಡೆಯುತ್ತಿದೆ. ಇಲಾಖೆಯ ಕಚೇರಿಯಲ್ಲಿ ಮನವಿ ಕೊಡಲು ಹೋದರೆ ಅದನ್ನು ತೆಗೆದುಕೊಳ್ಳಲು ನಿರಾಕರಣೆ ಮಾಡಲಾಗುತ್ತಿದೆ ಎಂದು ದೂರಿದರು. ಕೂಡಲೇ ಸಿಡಿಪಿಒ ಕುಂಬಾರ ಅವರನ್ನು ಇಲ್ಲಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವ ಪತ್ರ ಸಲ್ಲಿಸಿದರು ಸಂಘದ ಪದಾಧಿಕಾರಿಗಳಾದ ಶೋಭಾ ಕಾಖಂಡಕಿ, ಶೋಭಾ ಘಾಟಗೆ, ನೀಲಮ್ಮ ತೊಂಡಿಹಾಳ, ಅಯ್ಯಮ್ಮ ಮೂಕಿಹಾಳ, ಶಶಿಕಲಾ ನಾಗರಾಳ, ರಾಜಶ್ರೀ ಮಮದಾಪೂರ, ಅಯ್ಯಮ್ಮ ವಣಕಿಹಾಳ, ಶಕುಂತಲಾ ದೊಡಮನಿ,ಎಂ.ಎಸ್.ಸ್ಥಾವರಮಠ,ನಿಂಬೆಕ್ಕ ಕಾಳಾಪುರ,ಮಂಜುಳಾ ಜಾಧವ,ಚಂದ್ರಕಲಾ ಹಯಾಳ,ಸಾಹೆಬ್ಬಿ ಕೆಸರಟ್ಟಿ,ಕಮಲಾ ದೇಶಪಾಂಡೆ ಮೊದಲಾದವರು ಇದ್ದರು.

ಸಿಡಿಪಿಒ ವಿರುದ್ದ ಆರೋಪಗಳ ಪರಿಶೀಲನೆ:
ಸಿಡಿಪಿಒ ವಿರುದ್ಧದ ಆರೋಪಗಳ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರಿಗೆ ಮಾತನಾಡಿಸಿದಾಗ, ಕಾರ್ಯಕರ್ತೆಯರು ಕೊಟ್ಟಿರುವ ಮನವಿ ಪತ್ರದಲ್ಲಿರುವ ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಮುದ್ದೇಬಿಹಾಳಕ್ಕೆ ಮಂಗಳವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಭೇಟಿ ನೀಡಿದ್ದೆ ಹೊರತು ಕಾರ್ಯಕರ್ತೆಯರನ್ನಾಗಲೀ, ಸಿಡಿಪಿಒ ಅವರನ್ನಾಗಲೀ ಭೇಟಿ ಆಗಿಲ್ಲ ಎಂದು ಉಪ ನಿರ್ದೇಶಕ ಚವ್ಹಾಣ ಸ್ಪಷ್ಟಪಡಿಸಿದರು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ