ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ 2023 ರಲ್ಲಿ 443 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ ಸುಮಾರು 500ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ವಿಜಯಪುರ ಎಸ್ಪಿ ಋಷಿಕೇಶ ಸೋನಾವಣೆ ಹೇಳಿದರು.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕುಂಟೋಜಿ ಜಾತ್ರೆಗೆ ಬಂದಿದ್ದ ಯುವಕರು ರಸ್ತೆ ಬದಿ ಇಳಿದಿದ್ದಾಗ ವೇಗವಾಗಿ ಬಂದಿರುವ ಬೈಕ್ ಅವರಿಗೆ ಅಪ್ಪಳಿಸಿ ದುರ್ಘಟನೆ ಸಂಭವಿಸಿದೆ. ರಾಜ್ಯ ಹೆದ್ದಾರಿಗಳ ಮೇಲೆ ಸಂಚರಿಸುವ ವೇಳೆ ಬೈಕ್ ಸವಾರರು ಕನಿಷ್ಠ ಹೆಲ್ಮೆಟ್ ಧರಿಸಿ ಪ್ರಯಾಣ ಮಾಡಬೇಕು. ಇಲ್ಲದಿದ್ದಲ್ಲಿ ಅಪಘಾತಗಳಿಗೆ ಸಿಲುಕಿ ಅಮೂಲ್ಯ ಜೀವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿ ನಿಮ್ಮನ್ನು ನಂಬಿದವರ ಕುಟುಂಬಗಳಿಗೆ ನೋವು ಕೊಡುವ ಕೆಲಸ ಮಾಡಬೇಡಿ ಎಂದು ಹೇಳಿದರು.
ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಬಳಿ ಸಂಭವಿಸಿರುವ ಅಪಘಾತ ಈಚೇಗಿನ ದಿನಗಳಲ್ಲಿ ದೊಡ್ಡ ಘಟನೆಯಾಗಿದೆ. ಬಿಸಿಲಿನ ನೆಪ ಮಾಡಿಯೋ ಇನ್ನಾವುದೇ ಕಾರಣದಿಂದಲೋ ಹೆಲ್ಮೆಟ್ ಧರಿಸದೇ ಇರುವುದು ಈ ರೀತಿ ಜೀವಕ್ಕೆ ಆಪತ್ತು ತರುವ ಘಟನೆಗಳಾಗಲು ಕಾರಣವಾಗುತ್ತದೆ ಎಂದರು.
ರಸ್ತೆ ಬದಿ ನಡೆದುಕೊಂಡು ಹೋಗುವವರು ಮುನ್ನೆಚ್ಚರಿಕೆ ವಹಿಸಬೇಕು. ಕನಿಷ್ಠ ಮೊಬೈಲ್ ಟಾರ್ಚ್ನ್ನಾದರೂ ಹಚ್ಚಿಕೊಂಡು ತಿರುಗಾಡಬೇಕು. ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕಾದರೆ ಪೊಲೀಸರೊಂದಿಗೆ ಸಾರ್ವಜನಿಕರ ಸಹಭಾಗಿತ್ವ ಬಹುಮುಖ್ಯವಾಗುತ್ತದೆ ಎಂದು ಹೇಳಿದರು.
18 ವರ್ಷ ವಯಸ್ಸಿನ ಒಳಗಿನವರಿಗೆ ಬೈಕ್ ಓಡಿಸಲು ಕೊಟ್ಟರೆ ಅವರ ತಂದೆ ತಾಯಿ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ಟಂಟಂ, ಗೂಡ್ಸ್ ವಾಹನಗಳ ವಾಹನ ಚಾಲಕರಿಗೂ ರಸ್ತೆ ನಿಯಮಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಹಾಗೂ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಾಗಿ ಸೂಚನೆಗಳನ್ನು ನೀಡಿರುತ್ತೇವೆ. ಬೈಕ್ ಸವಾರರು ಹೆಲ್ಮೆಟ್ ಧರಿಸಬೇಕು, ಗೂಡ್ಸ್ ಚಾಲಕರು ಸಾರಿಗೆ ನಿಯಮಗಳಂತೆ ವಾಹನಗಳನ್ನು ಓಡಿಸಬೇಕು. ಅಪಘಾತಗಳಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಮಾಯಕರ ಜೀವ ಹಾನಿ ತಪ್ಪಿಸಬೇಕು ಎಂದು ಎಸ್ಪಿ ತಿಳಿಸಿದರು.
ಅಪಘಾತದ ಸ್ಥಳಕ್ಕೆ ಎಸ್ಪಿ ಭೇಟಿ:

ಕುಂಟೋಜಿ ಸಮೀಪದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದ ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಇದನ್ನೂ ಓದಿ: ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)
ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್ಐ ಸಂಜಯ ತಿಪರೆಡ್ಡಿ ಇದ್ದರು.
ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ ಮಾಹಿತಿ pic.twitter.com/Wob1quk1r0
— dcgkannada (@dcgkannada) September 6, 2024