Over 500 deaths in road accidents in one year: SP Rishikesh Sonana

ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

ರಸ್ತೆ ಅಪಘಾತದಲ್ಲಿ ಒಂದು ವರ್ಷದಲ್ಲಿ 500ಕ್ಕೂ ಅಧಿಕ ಸಾವು: ಎಸ್ಪಿ ಋಷಿಕೇಶ ಸೋನಾವಣೆ (ವಿಡಿಯೋ ನೋಡಿ)

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ 2023 ರಲ್ಲಿ 443 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ ಸುಮಾರು 500ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ವಿಜಯಪುರ ಎಸ್ಪಿ ಋಷಿಕೇಶ ಸೋನಾವಣೆ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕುಂಟೋಜಿ ಜಾತ್ರೆಗೆ ಬಂದಿದ್ದ ಯುವಕರು ರಸ್ತೆ ಬದಿ ಇಳಿದಿದ್ದಾಗ ವೇಗವಾಗಿ ಬಂದಿರುವ ಬೈಕ್ ಅವರಿಗೆ ಅಪ್ಪಳಿಸಿ ದುರ್ಘಟನೆ ಸಂಭವಿಸಿದೆ. ರಾಜ್ಯ ಹೆದ್ದಾರಿಗಳ ಮೇಲೆ ಸಂಚರಿಸುವ ವೇಳೆ ಬೈಕ್ ಸವಾರರು ಕನಿಷ್ಠ ಹೆಲ್ಮೆಟ್ ಧರಿಸಿ ಪ್ರಯಾಣ ಮಾಡಬೇಕು. ಇಲ್ಲದಿದ್ದಲ್ಲಿ ಅಪಘಾತಗಳಿಗೆ ಸಿಲುಕಿ ಅಮೂಲ್ಯ ಜೀವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿ ನಿಮ್ಮನ್ನು ನಂಬಿದವರ ಕುಟುಂಬಗಳಿಗೆ ನೋವು ಕೊಡುವ ಕೆಲಸ ಮಾಡಬೇಡಿ ಎಂದು ಹೇಳಿದರು.

ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಬಳಿ ಸಂಭವಿಸಿರುವ ಅಪಘಾತ ಈಚೇಗಿನ ದಿನಗಳಲ್ಲಿ ದೊಡ್ಡ ಘಟನೆಯಾಗಿದೆ. ಬಿಸಿಲಿನ ನೆಪ ಮಾಡಿಯೋ ಇನ್ನಾವುದೇ ಕಾರಣದಿಂದಲೋ ಹೆಲ್ಮೆಟ್ ಧರಿಸದೇ ಇರುವುದು ಈ ರೀತಿ ಜೀವಕ್ಕೆ ಆಪತ್ತು ತರುವ ಘಟನೆಗಳಾಗಲು ಕಾರಣವಾಗುತ್ತದೆ ಎಂದರು.

ರಸ್ತೆ ಬದಿ ನಡೆದುಕೊಂಡು ಹೋಗುವವರು ಮುನ್ನೆಚ್ಚರಿಕೆ ವಹಿಸಬೇಕು. ಕನಿಷ್ಠ ಮೊಬೈಲ್ ಟಾರ್ಚ್ನ್ನಾದರೂ ಹಚ್ಚಿಕೊಂಡು ತಿರುಗಾಡಬೇಕು. ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕಾದರೆ ಪೊಲೀಸರೊಂದಿಗೆ ಸಾರ್ವಜನಿಕರ ಸಹಭಾಗಿತ್ವ ಬಹುಮುಖ್ಯವಾಗುತ್ತದೆ ಎಂದು ಹೇಳಿದರು.

18 ವರ್ಷ ವಯಸ್ಸಿನ ಒಳಗಿನವರಿಗೆ ಬೈಕ್ ಓಡಿಸಲು ಕೊಟ್ಟರೆ ಅವರ ತಂದೆ ತಾಯಿ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ಟಂಟಂ, ಗೂಡ್ಸ್ ವಾಹನಗಳ ವಾಹನ ಚಾಲಕರಿಗೂ ರಸ್ತೆ ನಿಯಮಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಂದ ಹಾಗೂ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಾಗಿ ಸೂಚನೆಗಳನ್ನು ನೀಡಿರುತ್ತೇವೆ. ಬೈಕ್ ಸವಾರರು ಹೆಲ್ಮೆಟ್ ಧರಿಸಬೇಕು, ಗೂಡ್ಸ್ ಚಾಲಕರು ಸಾರಿಗೆ ನಿಯಮಗಳಂತೆ ವಾಹನಗಳನ್ನು ಓಡಿಸಬೇಕು. ಅಪಘಾತಗಳಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಮಾಯಕರ ಜೀವ ಹಾನಿ ತಪ್ಪಿಸಬೇಕು ಎಂದು ಎಸ್ಪಿ ತಿಳಿಸಿದರು.

ಅಪಘಾತದ ಸ್ಥಳಕ್ಕೆ ಎಸ್ಪಿ ಭೇಟಿ:

ಕುಂಟೋಜಿ ಸಮೀಪದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದ ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಇದ್ದರು.

Latest News

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ