ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ ಆಗಬೇಕು.ಇಂದು ಸರ್ಕಾರಿ ಶಿಕ್ಷಣ ಸಂಸ್ಥೆಗಳು ಸರಿಯಾಗಿಲ್ಲದ್ದಕ್ಕಾಗಿಯೇ ಬಹುತೇಕ ಶಿಕ್ಷಕರು,ಪಾಲಕರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಕಲಿಸಲು ಕಳಿಸುತ್ತಿದ್ದಾರೆ. ಇಲ್ಲಿ ಓದಿ ವೈದ್ಯರಾಗುವರು ಸ್ವದೇಶದಲ್ಲಿ ಸೇವೆ ಸಲ್ಲಿಸಬೇಕು.ಒಳ್ಳೆಯ ವೈದ್ಯರಾಗಿ,ಇಂಜಿನಿಯರ್ ಆಗಿ ಸೇವೆ ಸಲ್ಲಿಸಬೇಕು ಎಂದು ಹೇಳಿದರು.

ಹೈದರಾಬಾದ್‌ನ ಶೈಕ್ಷಣಿಕ ತರಬೇತಿದಾರರಾದ ಗಿರಿಧರ ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಅಂಕ ಗಳಿಸುವುದೊಂದೇ ಇಲ್ಲಿ ಮಾನದಂಡ.ಅದಕ್ಕೆ ಜಾತಿ,ಬಡತನ,ಧರ್ಮ,ವರ್ಗ,ವರ್ಣ,ಆರ್ಥಿಕ ಸ್ಥಿತಿ ಇನ್ಯಾವುದು ಇಲ್ಲಿ ಪರಿಗಣನೆ ಆಗುವುದಿಲ್ಲ.ಮಕ್ಕಳನ್ನು ಸಾಲ ಮಾಡಿಸಿಯಾದರೂ ಓದಿಸಿ.ಮಕ್ಕಳ ಮದುವೆಗೆ ದುಂದು ವೆಚ್ಚ ಮಾಡಬೇಡಿ.ಅವರ ಕಲಿಕೆಗಾಗಿ ಹಣ ತೊಡಗಿಸಿ.ಕಲಿಕೆ ಜೀವನಕ್ಕೆ ದಾರಿಯಾಗುವಂತಿರಬೇಕು.ಆದರೆ ಅದು ಯಾವುದಕ್ಕೂ ಉಪಯೋಗಕ್ಕೆ ಬರದಿದ್ದರೆ ವ್ಯರ್ಥ.ಮಕ್ಕಳು ತಮ್ಮ ಹೆತ್ತವರಿಗೆ ಕೀರ್ತಿ ತರುವ ಸಾಧನೆ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಮಾತನಾಡಿ,ನಮ್ಮ ಸಂಸ್ಥೆಯಲ್ಲಿ ಕೋವಿಡ್ ಅವಧಿ 2020ರಲ್ಲಿಯೇ 85 ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡಿದ್ದು 2021 ರಲ್ಲಿ 123, 2022ರಲ್ಲಿ 143, 2023ರಲ್ಲಿ 145, 2024ರಲ್ಲಿ 172, 2025ರಲ್ಲಿ 187 ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡಿದ್ದಾರೆ.ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಮೂರು ಕೋಟಿ ರೂ.ವೆಚ್ಚದ ಸ್ಕಾಲರ್‌ಶಿಪ್ ಕೊಡುವ ಕೆಲಸ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆ ಮಾತ್ರ ಮಾಡುತ್ತಿದೆ.ನಾವು ದುಡ್ಡು ಮಾಡಬೇಕು ಎಂದು ಸಂಸ್ಥೆ ಕಟ್ಟಿಲ್ಲ.ಬೆಂಗಳೂರು, ಮಂಗಳೂರು ಕಾಲೇಜುಗಳಲ್ಲಿ ಕೊಡುವ ಫಲಿತಾಂಶ ನಮ್ಮ ಭಾಗದಲ್ಲೂ ಕೊಡಲಾಗುತ್ತಿದೆ ಎಂದು ಹೇಳಿದರು. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ,ದೇವಿಕಾ ಸುಬ್ಬಾರಾವ್ ಫೌಂಡೇಶನ್ ಅಧ್ಯಕ್ಷೆ ಪಲ್ಲವಿ ನಾಡಗೌಡ, ಪ್ರೋ.ಬಸವರಾಜ ಅಸ್ಕಿ, ಡಾ.ಎಸ್.ಬಿ.ಬಿರಾದಾರ ಮಾತನಾಡಿದರು. ಮುದನೂರ ಕಂಠಿಮಠದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ್, ಪ್ರಾಚಾರ್ಯರಾದ ರೇವಣಸಿದ್ದ ಮುರಾಳ, ಪ್ರೊ.ಎನ್.ಎ.ಬಿರಾಜದಾರ,ಶಿಕ್ಷಕ ಸಂಗಮೇಶ ಹೂಗಾರ,ರಾಜಶೇಖರ ಹಿರೇಮಠ,ಆನಂದ ನಾವಿ ಇದ್ದರು. ಇಸ್ಮಾಯಿಲ್ ಮನಿಯಾರ್ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ 2025ರಲ್ಲಿ ಮೆಡಿಕಲ್‌ಗೆ ಆಯ್ಕೆಯಾದ 187 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜೀನಿಯಸ್ ಅವಾರ್ಡ್ ಪುರಸ್ಕೃತರು :
ಎರಡು ವರ್ಷದ ಸಂಪೂರ್ಣ ವಸತಿ,ಊಟ ಸಮೇತ ಉಚಿತ ಶಿಕ್ಷಣಕ್ಕೆ ಅಕುಲ್ ಸವಣೂರ,ಅಜಯೆಕುಮಾರ ಜಗ್ಗಲ,ಶಿವಕುಮಾರ ಕಡಿಮನಿ,ಕೀರ್ತನಾ ಮಸಲಗಿ,ಶ್ರೇಯಾ ಗಾಳಿ, ಶ್ರೀಹರಿ ಎಂ.ಜಿ.,ದೀಪಾ ಗಾಡಿ,ಶ್ರೇಯಸ್ ಕಲ್ಲಗೋನಾಳ,ಸಮೃದ್ಧಿ ದೇಸಾಯಿ,ಸುನೀಲ ಹೊಸಮನಿ, ಬಸವರಾಜ ದಿವಟಗಿ,ಸಾಕ್ಷಿ ಬೆಳ್ಳುಂಡಗಿ,ಅರ್ನವ್ ಕುರಂದವಾಡೆ,ಚಿನ್ಮಯಕುಮಾರ ನಾಗೂರ,ಸಂಪತಕುಮಾರ ಉಕ್ಕನಾಳ,ಶ್ರೀನಿವಾಸ ಕಟ್ಟಿಮನಿ,ಚೈತ್ರಾ ಮಹದೇವ,ಮೈಮುನಾ ಮುದ್ನಾಳ, ಸುಪ್ರೀತ ಪಾಟೀಲ,ವಿವೇಕಾನಂದ ಮುದ್ದನೂರಮಠ ಅವರು ಆಯ್ಕೆಯಾದರು.ಇನ್ನುಳಿದಂತೆ 21-40 ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ,40-60 ನೇ ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶಿಕ್ಷಣಕ್ಕೆ ಶೇ.50ರಷ್ಟು ಶುಲ್ಕ ರಿಯಾಯಿತಿ,61-80 ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಶುಲ್ಕ ರಿಯಾಯಿತಿಗೆ ಆಯ್ಕೆ ಮಾಡಲಾಯಿತು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ