Padmavati fair started march 22

ಮಾ.22 ರಿಂದ ಪದ್ಮಾವತಿ ದೇವಿ ಜಾತ್ರಾ ಮಹೋತ್ಸವ

ಮಾ.22 ರಿಂದ ಪದ್ಮಾವತಿ ದೇವಿ ಜಾತ್ರಾ ಮಹೋತ್ಸವ

Ad
Ad

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ದೇವಿ ಜಾತ್ರಾ ಮಹೋತ್ಸವ ಮಾ.21 ರಿಂದ 23 ರವರೆಗೆ ಹಮ್ಮಿಕೊಳ್ಳಲಾಗಿದ್ದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾ.21 ರಂದು ಬೆಳಗ್ಗೆ 6ಕ್ಕೆ ಮಂಗಲವಾದ್ಯ, ಘೋಷ, ಬೆಳಗ್ಗೆ 8 ರಿಂದ ಪ್ರಾರ್ಥನೆ, ಧ್ವಜಾರೋಹಣ, ತೋರಣ ಮಹೂರ್ತ, ಪುಣ್ಯವಾಚನ, ಶುದ್ಧಿ ಹವನ, ಕಂಕಣ ಬಂಧನ, ಪಾರ್ಶ್ವನಾಥ ತೀರ್ಥಂಕರರಿಗೆ ನವ ಕಳಸ ಅಭಿಷೇಕ, ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ ಪೂಜೆ ಹಾಗೂ ಆರತಿ ಸಂಜೆ 4ಕ್ಕೆ ನವಗ್ರಹ ವಿಧಾನ 108 ಪುಷ್ಪಾರ್ಚನೆ,108 ಕುಂಕುಮಾರ್ಚನೆ ರಾತ್ರಿ 8ಕ್ಕೆ ಮಂಗಳಾರತಿ ನಂತರ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.

Ad
Ad

ಮಾ.22 ರಂದು ಧಾರ್ಮಿಕ ವಿಧಿವಿಧಾನಗಳು, ದೇವಸ್ಥಾನದ ರಥದ ಹಗ್ಗ, ಕಳಸ, ಪಲ್ಲಕ್ಕಿ ಮೆರವಣಿಗೆ, ಬಳಿಕ ರಥ ಶುದ್ಧಿ ಹವನ ಮದ್ಯಾಹ್ನ 12ಕ್ಕೆ ಚಡಾವು ಸವಾಲು ನಡೆಯಲಿದೆ. ಮದ್ಯಾಹ್ನ 2ಕ್ಕೆ ಧರ್ಮಸಭೆ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ. ಅಧ್ಯಕ್ಷತೆಯನ್ನು ಪದ್ಮಾವತಿ ಟ್ರಸ್ಟ್ ಕಮೀಟಿ ಅಧ್ಯಕ್ಷ ಅಭಿನಂದನ ಗೋಗಿ ವಹಿಸುವರು. ಶಾಸಕ ಸಿ. ಎಸ್. ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ, ಕೇಂದ್ರ ಸಾಹಿತ್ಯ ಅಕಾಡೆಮಿ ಅನುದಾವ ಪ್ರಶಸ್ತಿ ಪುರಸ್ಕೃತರಾದ ಪದ್ಮರಾಜ ದಂಡಾವತಿ, ಹುಲಕೋಟಿ ಕೆ. ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಅಪ್ಪಣ್ಣ ಹಂಜಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ದೇವಸ್ಥಾನ ಟ್ರಸ್ಟ್ ಉಪಾಧ್ಯಕ್ಷ ಗೊಮ್ಮಟೇಶ್ವರ ಸಗರಿ, ಹಡಲಗೇರಿ ಗ್ರಾಪಂ ಅಧ್ಯಕ್ಷೆ ಲಕ್ಷಿಬಾಯಿ ಬಿರಾದಾರ ಆಗಮಿಸುವರು.

ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಗುತ್ತದೆ. ಮಾ. 13ರಂದು ಜಾತ್ರೆಯ ಸಮಾರೋಪ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.