ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ವೊಂದರ ಚೇಂಬರ್‌ನಲ್ಲಿ ಸತ್ತ ನಾಯಿ ಕಳೆಬರ ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಗುರುವಾರ ಸಂಜೆ ಹಾಗೂ ಶುಕ್ರವಾರ ದೌಡಾಯಿಸಿದ್ದಾರೆ.
ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಒಪಿಡಿ ಸೇವೆ ಆರಂಭಿಸಲಾಗಿದ್ದು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ ತಿವಾರಿ, ಜಮ್ಮಲದಿನ್ನಿ ಗ್ರಾಮಕ್ಕೆ ನೀರು ಪೂರೈಕೆ ವಾಲ್ವ್ದ ಚೇಂಬರ್‌ನಲ್ಲಿ ನಾಯಿ ಸತ್ತು ಬಿದ್ದಿರುವುದರಿಂದ ನೀರು ವಿಷಮಯವಾಗಿರುತ್ತದೆ.ಅದನ್ನು ಸೇವನೆ ಮಾಡಿದರೆ ತೀವ್ರ ಗಂಭೀರ ಪರಿಣಾಮಗಳು ಉಂಟಾಗುತ್ತವೆ.ಸದ್ಯಕ್ಕೆ ಗ್ರಾಮದಲ್ಲಿ ಸಂಚರಿಸಿ ಮನೆ ಮನೆಗೆ ಸಮೀಕ್ಷೆ ನಡೆಸಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಅಲ್ಲದೇ ಈ ವಾಲ್ವ್ನಿಂದ ಪೂರೈಕೆಯಾಗಿರುವ ನೀರನ್ನು ಪರೀಕ್ಷೆಗೆಂದು ಲ್ಯಾಬ್‌ಗೆ ಕಳಿಸಿಕೊಡಲಾಗುವುದು. ನೀರು ಪೂರೈಕೆ ಮಾಡಬೇಕಾದರೆ ಪಂಚಾಯಿತಿಯವರು ಪೈಪ್‌ಲೈನ್ ಶುಚಿತ್ವಗೊಳಿಸಿ ಪೂರೈಕೆಗೆ ಕ್ರಮ ಜರುಗಿಸಿ ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ತಾಪಂ ಇಒ,ಆರ್‌ಡಬ್ಲೂö್ಯಎಸ್ ಎಇಇ ಭೇಟಿ: ವಾಲ್ವ್ನಲ್ಲಿ ನಾಯಿ ಸತ್ತು ಬಿದ್ದಿರುವ ವಿಷಯ ತಿಳಿಯುತ್ತಲೇ ಸ್ಥಳಕ್ಕೆ ತಾಪಂ ಇಒ ನಿಂಗಪ್ಪ ಮಸಳಿ, ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆ ಎಇಇ ಆರ್.ಎಸ್.ಹಿರೇಗೌಡ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮಸ್ಥರ ತರಾಟೆ:

ಕುಡಿವ ನೀರು ಪೂರೈಕೆಯಲ್ಲಿ ದಿವ್ಯ ನಿರ್ಲಕ್ಷö್ಯ ವಹಿಸಿರುವ ಇಂಗಳಗೇರಿ ಪಂಚಾಯಿತಿ ಪಿಡಿಒ ವಿಜಯಮಹಾಂತೇಶ ಕೋರಿ, ಕಾರ್ಯದರ್ಶಿ ಬಸನಗೌಡ ಬಿರಾದಾರ ಅವರನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡರು.ವಾಲ್ವ್ದಲ್ಲಿ ಸತ್ತ ನಾಯಿ ಬಿದ್ದಿರುವುದನ್ನು ಗಮನಿಸದಂತೆ ನಿಮ್ಮ ಪಂಚಾಯಿತಿ ವಾಲ್ವ್ಮನಗಳು ಕೆಲಸ ಮಾಡುತ್ತಾರೆ ಎಂದರೆ ಕಲುಷಿತ ನೀರು ಕುಡಿದ ಗ್ರಾಮಸ್ಥರ ಆರೋಗ್ಯದಲ್ಲಿ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಯಾರು ಹೊಣೆಗಾರರು ಎಂದು ಪ್ರಶ್ನಿಸಿದರು.

ಇಂಗಳಗೇರಿ ಗ್ರಾಪಂನಿAದ ಸತ್ತು ಬಿದ್ದಿದ್ದ ನಾಯಿಯ ಕಳೆಬರವನ್ನು ವಿಲೇವಾರಿ ಮಾಡಿ ಅಲ್ಲಿ ರೋಗ ನಿರೋಧಕ ಪೌಡರ್‌ನ್ನು ಸಿಂಪಡಣೆ ಮಾಡಲಾಗಿದೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು