ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ವೊಂದರ ಚೇಂಬರ್‌ನಲ್ಲಿ ಸತ್ತ ನಾಯಿ ಕಳೆಬರ ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಗುರುವಾರ ಸಂಜೆ ಹಾಗೂ ಶುಕ್ರವಾರ ದೌಡಾಯಿಸಿದ್ದಾರೆ.
ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಒಪಿಡಿ ಸೇವೆ ಆರಂಭಿಸಲಾಗಿದ್ದು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ ತಿವಾರಿ, ಜಮ್ಮಲದಿನ್ನಿ ಗ್ರಾಮಕ್ಕೆ ನೀರು ಪೂರೈಕೆ ವಾಲ್ವ್ದ ಚೇಂಬರ್‌ನಲ್ಲಿ ನಾಯಿ ಸತ್ತು ಬಿದ್ದಿರುವುದರಿಂದ ನೀರು ವಿಷಮಯವಾಗಿರುತ್ತದೆ.ಅದನ್ನು ಸೇವನೆ ಮಾಡಿದರೆ ತೀವ್ರ ಗಂಭೀರ ಪರಿಣಾಮಗಳು ಉಂಟಾಗುತ್ತವೆ.ಸದ್ಯಕ್ಕೆ ಗ್ರಾಮದಲ್ಲಿ ಸಂಚರಿಸಿ ಮನೆ ಮನೆಗೆ ಸಮೀಕ್ಷೆ ನಡೆಸಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಅಲ್ಲದೇ ಈ ವಾಲ್ವ್ನಿಂದ ಪೂರೈಕೆಯಾಗಿರುವ ನೀರನ್ನು ಪರೀಕ್ಷೆಗೆಂದು ಲ್ಯಾಬ್‌ಗೆ ಕಳಿಸಿಕೊಡಲಾಗುವುದು. ನೀರು ಪೂರೈಕೆ ಮಾಡಬೇಕಾದರೆ ಪಂಚಾಯಿತಿಯವರು ಪೈಪ್‌ಲೈನ್ ಶುಚಿತ್ವಗೊಳಿಸಿ ಪೂರೈಕೆಗೆ ಕ್ರಮ ಜರುಗಿಸಿ ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ತಾಪಂ ಇಒ,ಆರ್‌ಡಬ್ಲೂö್ಯಎಸ್ ಎಇಇ ಭೇಟಿ: ವಾಲ್ವ್ನಲ್ಲಿ ನಾಯಿ ಸತ್ತು ಬಿದ್ದಿರುವ ವಿಷಯ ತಿಳಿಯುತ್ತಲೇ ಸ್ಥಳಕ್ಕೆ ತಾಪಂ ಇಒ ನಿಂಗಪ್ಪ ಮಸಳಿ, ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆ ಎಇಇ ಆರ್.ಎಸ್.ಹಿರೇಗೌಡ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮಸ್ಥರ ತರಾಟೆ:

ಕುಡಿವ ನೀರು ಪೂರೈಕೆಯಲ್ಲಿ ದಿವ್ಯ ನಿರ್ಲಕ್ಷö್ಯ ವಹಿಸಿರುವ ಇಂಗಳಗೇರಿ ಪಂಚಾಯಿತಿ ಪಿಡಿಒ ವಿಜಯಮಹಾಂತೇಶ ಕೋರಿ, ಕಾರ್ಯದರ್ಶಿ ಬಸನಗೌಡ ಬಿರಾದಾರ ಅವರನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡರು.ವಾಲ್ವ್ದಲ್ಲಿ ಸತ್ತ ನಾಯಿ ಬಿದ್ದಿರುವುದನ್ನು ಗಮನಿಸದಂತೆ ನಿಮ್ಮ ಪಂಚಾಯಿತಿ ವಾಲ್ವ್ಮನಗಳು ಕೆಲಸ ಮಾಡುತ್ತಾರೆ ಎಂದರೆ ಕಲುಷಿತ ನೀರು ಕುಡಿದ ಗ್ರಾಮಸ್ಥರ ಆರೋಗ್ಯದಲ್ಲಿ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಯಾರು ಹೊಣೆಗಾರರು ಎಂದು ಪ್ರಶ್ನಿಸಿದರು.

ಇಂಗಳಗೇರಿ ಗ್ರಾಪಂನಿAದ ಸತ್ತು ಬಿದ್ದಿದ್ದ ನಾಯಿಯ ಕಳೆಬರವನ್ನು ವಿಲೇವಾರಿ ಮಾಡಿ ಅಲ್ಲಿ ರೋಗ ನಿರೋಧಕ ಪೌಡರ್‌ನ್ನು ಸಿಂಪಡಣೆ ಮಾಡಲಾಗಿದೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ