ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ವೊಂದರ ಚೇಂಬರ್‌ನಲ್ಲಿ ಸತ್ತ ನಾಯಿ ಕಳೆಬರ ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಗುರುವಾರ ಸಂಜೆ ಹಾಗೂ ಶುಕ್ರವಾರ ದೌಡಾಯಿಸಿದ್ದಾರೆ.
ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಒಪಿಡಿ ಸೇವೆ ಆರಂಭಿಸಲಾಗಿದ್ದು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ ತಿವಾರಿ, ಜಮ್ಮಲದಿನ್ನಿ ಗ್ರಾಮಕ್ಕೆ ನೀರು ಪೂರೈಕೆ ವಾಲ್ವ್ದ ಚೇಂಬರ್‌ನಲ್ಲಿ ನಾಯಿ ಸತ್ತು ಬಿದ್ದಿರುವುದರಿಂದ ನೀರು ವಿಷಮಯವಾಗಿರುತ್ತದೆ.ಅದನ್ನು ಸೇವನೆ ಮಾಡಿದರೆ ತೀವ್ರ ಗಂಭೀರ ಪರಿಣಾಮಗಳು ಉಂಟಾಗುತ್ತವೆ.ಸದ್ಯಕ್ಕೆ ಗ್ರಾಮದಲ್ಲಿ ಸಂಚರಿಸಿ ಮನೆ ಮನೆಗೆ ಸಮೀಕ್ಷೆ ನಡೆಸಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಅಲ್ಲದೇ ಈ ವಾಲ್ವ್ನಿಂದ ಪೂರೈಕೆಯಾಗಿರುವ ನೀರನ್ನು ಪರೀಕ್ಷೆಗೆಂದು ಲ್ಯಾಬ್‌ಗೆ ಕಳಿಸಿಕೊಡಲಾಗುವುದು. ನೀರು ಪೂರೈಕೆ ಮಾಡಬೇಕಾದರೆ ಪಂಚಾಯಿತಿಯವರು ಪೈಪ್‌ಲೈನ್ ಶುಚಿತ್ವಗೊಳಿಸಿ ಪೂರೈಕೆಗೆ ಕ್ರಮ ಜರುಗಿಸಿ ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ತಾಪಂ ಇಒ,ಆರ್‌ಡಬ್ಲೂö್ಯಎಸ್ ಎಇಇ ಭೇಟಿ: ವಾಲ್ವ್ನಲ್ಲಿ ನಾಯಿ ಸತ್ತು ಬಿದ್ದಿರುವ ವಿಷಯ ತಿಳಿಯುತ್ತಲೇ ಸ್ಥಳಕ್ಕೆ ತಾಪಂ ಇಒ ನಿಂಗಪ್ಪ ಮಸಳಿ, ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆ ಎಇಇ ಆರ್.ಎಸ್.ಹಿರೇಗೌಡ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅಲ್ಲದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮಸ್ಥರ ತರಾಟೆ:

ಕುಡಿವ ನೀರು ಪೂರೈಕೆಯಲ್ಲಿ ದಿವ್ಯ ನಿರ್ಲಕ್ಷö್ಯ ವಹಿಸಿರುವ ಇಂಗಳಗೇರಿ ಪಂಚಾಯಿತಿ ಪಿಡಿಒ ವಿಜಯಮಹಾಂತೇಶ ಕೋರಿ, ಕಾರ್ಯದರ್ಶಿ ಬಸನಗೌಡ ಬಿರಾದಾರ ಅವರನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡರು.ವಾಲ್ವ್ದಲ್ಲಿ ಸತ್ತ ನಾಯಿ ಬಿದ್ದಿರುವುದನ್ನು ಗಮನಿಸದಂತೆ ನಿಮ್ಮ ಪಂಚಾಯಿತಿ ವಾಲ್ವ್ಮನಗಳು ಕೆಲಸ ಮಾಡುತ್ತಾರೆ ಎಂದರೆ ಕಲುಷಿತ ನೀರು ಕುಡಿದ ಗ್ರಾಮಸ್ಥರ ಆರೋಗ್ಯದಲ್ಲಿ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಯಾರು ಹೊಣೆಗಾರರು ಎಂದು ಪ್ರಶ್ನಿಸಿದರು.

ಇಂಗಳಗೇರಿ ಗ್ರಾಪಂನಿAದ ಸತ್ತು ಬಿದ್ದಿದ್ದ ನಾಯಿಯ ಕಳೆಬರವನ್ನು ವಿಲೇವಾರಿ ಮಾಡಿ ಅಲ್ಲಿ ರೋಗ ನಿರೋಧಕ ಪೌಡರ್‌ನ್ನು ಸಿಂಪಡಣೆ ಮಾಡಲಾಗಿದೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ