ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಮುದ್ದೇಬಿಹಾಳ : ಮುಡಾ ಹಗರಣದ ತೂಗುಗತ್ತಿ ಯಾವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ತೂಗಾಡುತ್ತಿದೆಯೋ ಅಲ್ಲಿಂದಲೇ ಅವರಿಗೆ ಮತಿಭ್ರಮಣೆಯಾದಂತಾಗಿದ್ದು ವಕ್ಭ್ಬೋರ್ಡ್ ಹೆಸರಲ್ಲಿ ರೈತರ ಮೇಲೆ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತರು ವಕ್ಭ್ ಬೋರ್ಡ್ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಎರಡನೇ ದಿನದ ಹೋರಾಟದಲ್ಲಿ ಅವರು ಬೆಂಬಲ ಸೂಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಎರಡೇ ತಿಂಗಳಲ್ಲಿ ಶೇ.38 ರಷ್ಟು ವಕ್ಭ್ ಆಸ್ತಿ ಹೆಚ್ಚಳವಾಗಿದೆ. ಸಾರ್ವಜನಿಕರು, ಮಠಾಧೀಶರು, ಬಿಜೆಪಿ ಪಕ್ಷದಿಂದ ಹೋರಾಟ ತೀವ್ರಗೊಂಡಾಗ ಸಿಎಂ ರೈತರ ಪಹಣಿಗಳಲ್ಲಿನ ವಕ್ಭ್ ಬೋರ್ಡ ಪದ ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಆದರೂ ತಹÀಶೀಲ್ದಾರರು , ಡಿಸಿ ಮಲಗಿದ್ದಾರೆಯೇ ಸಿಎಂ ಆದೇಶಕ್ಕೆ ಬೆಲೆ ಇಲ್ಲವೇ ? ಸಿಎಂ ಆದೇಶ ಮಾಡಿದ್ದೇನೆ ಎಂದು ಹೇಳಿಕೆ ಕೊಟ್ಟರೂ ಅದಕ್ಕೆ ಸ್ಪಂದನೆ ಇಲ್ಲವಾಗಿದೆ.ಕಾಂಗ್ರೆಸ್ ಸರ್ಕಾರ ಜನವಿರೋಧಿ, ರೈತ ವಿರೋಧಿ ಸರ್ಕಾರ ಎಂದು ಹೇಳಿದರು.

ಕೇವಲ ಬಾಯಿ ಮಾತಿನ ಮೇಲೆ ನೋಟೀಸ್ ವಾಪಸ್ ಪಡೆದುಕೊಂಡಿದ್ದೇನೆ ಎಂದು ಹೇಳಿದರೆ ಸಾಲದು. ವಕ್ಭ್ ಬೋರ್ಡ್ ಎಂದು ಎಂಟ್ರಿ ಮಾಡಿದ್ದನ್ನು ತೆಗೆದು ಹಾಕಬೇಕು. ಒಂದು ಎಕರೆ ಜಮೀನು ವಕ್ಭ್ ಬೋರ್ಡ್ಗೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಗಂಗಾಧರ ನಾಡಗೌಡ , ಹೋರಾಟಗಾರ ನಾಗಲಿಂಗಯ್ಯ ಮಠ ಮಾತನಾಡಿ, ಸರ್ಕಾರದ ಕ್ರಮ ವಿರುದ್ಧ ಆಕ್ರೋಶ ಹೊರಹಾಕಿದರು. ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ 400 ಎಕರೆ ಜಮೀನುಗಳ ಮೇಲೆ ವಕ್ಭ್ ಬೋರ್ಡ್ ಹೆಸರು ಇರುವುದನ್ನು ತೆಗೆದು ಹಾಕಬೇಕು ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಶಾಸಕ ಅಪ್ಪಾಜಿ ಮೌನವೇಕೆ ?: ತಾಲ್ಲೂಕಿನ ರೈತರಿಗೆ ಅನ್ಯಾಯವಾಗುತ್ತಿದ್ದರೂ ಶಾಸಕರು ಏನು ಮಾಡುತ್ತಿದ್ದೀರಿ ? ರೈತರ ಆಸ್ತಿ ಲೂಟಿ ಹೊಡೆಯುವವರ ಪರವಾಗಿದ್ದೀರಾ ? ಎಂದು ಮಾಜಿ ಶಾಸಕ ನಡಹಳ್ಳಿ ಪ್ರಶ್ನಿಸಿದರು.ಸಿಎಂ ಹೇಳಿಕೆ ಕೊಟ್ಟಿದ್ದು, ಆ ಬಗ್ಗೆ ಶಾಸಕರು ಹೋರಾಟಗಾರರಿಗೆ ಮನವರಿಕೆ ಮಾಡಿಕೊಡಬೇಕಿತ್ತು.ಆದರೆ ಈವರೆಗೂ ಅವರಿಂದ ರೈತರಪರವಾಗಿ ಒಂದು ಹೇಳಿಕೆ ಇಲ್ಲ.ತಹಶೀಲ್ದಾರ್‌ಗೆ ತಿಳಿಸಿ ವಕ್ಭ್ ಬೋರ್ಡ ಕರ್ನಾಟಕ ಸರ್ಕಾರ ತಗೆದುಹಾಕಲು ತಿಳಿಸಬೇಕು ಎಂದು ಹರಿಹಾಯ್ದರು.ಮುಖಂಡ ಕೆಂಚಪ್ಪ ಬಿರಾದಾರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಸಂಗಣ್ಣ ಕುಂಬಾರ,ರವಿ ಜಗಲಿ,ರವೀಂದ್ರ ಬಿರಾದಾರ, ರೈತ ಸಂಘಟನೆಯ ಮುಖಂಡ ಸಂಗಣ್ಣ ಬಾಗೇವಾಡಿ ಸೇರಿದಂತೆ ರೈತ ಮಹಿಳೆಯರು ಪಾಲ್ಗೊಂಡಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ