ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಮುದ್ದೇಬಿಹಾಳ : ಮುಡಾ ಹಗರಣದ ತೂಗುಗತ್ತಿ ಯಾವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ತೂಗಾಡುತ್ತಿದೆಯೋ ಅಲ್ಲಿಂದಲೇ ಅವರಿಗೆ ಮತಿಭ್ರಮಣೆಯಾದಂತಾಗಿದ್ದು ವಕ್ಭ್ಬೋರ್ಡ್ ಹೆಸರಲ್ಲಿ ರೈತರ ಮೇಲೆ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತರು ವಕ್ಭ್ ಬೋರ್ಡ್ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಎರಡನೇ ದಿನದ ಹೋರಾಟದಲ್ಲಿ ಅವರು ಬೆಂಬಲ ಸೂಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಎರಡೇ ತಿಂಗಳಲ್ಲಿ ಶೇ.38 ರಷ್ಟು ವಕ್ಭ್ ಆಸ್ತಿ ಹೆಚ್ಚಳವಾಗಿದೆ. ಸಾರ್ವಜನಿಕರು, ಮಠಾಧೀಶರು, ಬಿಜೆಪಿ ಪಕ್ಷದಿಂದ ಹೋರಾಟ ತೀವ್ರಗೊಂಡಾಗ ಸಿಎಂ ರೈತರ ಪಹಣಿಗಳಲ್ಲಿನ ವಕ್ಭ್ ಬೋರ್ಡ ಪದ ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಆದರೂ ತಹÀಶೀಲ್ದಾರರು , ಡಿಸಿ ಮಲಗಿದ್ದಾರೆಯೇ ಸಿಎಂ ಆದೇಶಕ್ಕೆ ಬೆಲೆ ಇಲ್ಲವೇ ? ಸಿಎಂ ಆದೇಶ ಮಾಡಿದ್ದೇನೆ ಎಂದು ಹೇಳಿಕೆ ಕೊಟ್ಟರೂ ಅದಕ್ಕೆ ಸ್ಪಂದನೆ ಇಲ್ಲವಾಗಿದೆ.ಕಾಂಗ್ರೆಸ್ ಸರ್ಕಾರ ಜನವಿರೋಧಿ, ರೈತ ವಿರೋಧಿ ಸರ್ಕಾರ ಎಂದು ಹೇಳಿದರು.

ಕೇವಲ ಬಾಯಿ ಮಾತಿನ ಮೇಲೆ ನೋಟೀಸ್ ವಾಪಸ್ ಪಡೆದುಕೊಂಡಿದ್ದೇನೆ ಎಂದು ಹೇಳಿದರೆ ಸಾಲದು. ವಕ್ಭ್ ಬೋರ್ಡ್ ಎಂದು ಎಂಟ್ರಿ ಮಾಡಿದ್ದನ್ನು ತೆಗೆದು ಹಾಕಬೇಕು. ಒಂದು ಎಕರೆ ಜಮೀನು ವಕ್ಭ್ ಬೋರ್ಡ್ಗೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಗಂಗಾಧರ ನಾಡಗೌಡ , ಹೋರಾಟಗಾರ ನಾಗಲಿಂಗಯ್ಯ ಮಠ ಮಾತನಾಡಿ, ಸರ್ಕಾರದ ಕ್ರಮ ವಿರುದ್ಧ ಆಕ್ರೋಶ ಹೊರಹಾಕಿದರು. ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ 400 ಎಕರೆ ಜಮೀನುಗಳ ಮೇಲೆ ವಕ್ಭ್ ಬೋರ್ಡ್ ಹೆಸರು ಇರುವುದನ್ನು ತೆಗೆದು ಹಾಕಬೇಕು ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಶಾಸಕ ಅಪ್ಪಾಜಿ ಮೌನವೇಕೆ ?: ತಾಲ್ಲೂಕಿನ ರೈತರಿಗೆ ಅನ್ಯಾಯವಾಗುತ್ತಿದ್ದರೂ ಶಾಸಕರು ಏನು ಮಾಡುತ್ತಿದ್ದೀರಿ ? ರೈತರ ಆಸ್ತಿ ಲೂಟಿ ಹೊಡೆಯುವವರ ಪರವಾಗಿದ್ದೀರಾ ? ಎಂದು ಮಾಜಿ ಶಾಸಕ ನಡಹಳ್ಳಿ ಪ್ರಶ್ನಿಸಿದರು.ಸಿಎಂ ಹೇಳಿಕೆ ಕೊಟ್ಟಿದ್ದು, ಆ ಬಗ್ಗೆ ಶಾಸಕರು ಹೋರಾಟಗಾರರಿಗೆ ಮನವರಿಕೆ ಮಾಡಿಕೊಡಬೇಕಿತ್ತು.ಆದರೆ ಈವರೆಗೂ ಅವರಿಂದ ರೈತರಪರವಾಗಿ ಒಂದು ಹೇಳಿಕೆ ಇಲ್ಲ.ತಹಶೀಲ್ದಾರ್‌ಗೆ ತಿಳಿಸಿ ವಕ್ಭ್ ಬೋರ್ಡ ಕರ್ನಾಟಕ ಸರ್ಕಾರ ತಗೆದುಹಾಕಲು ತಿಳಿಸಬೇಕು ಎಂದು ಹರಿಹಾಯ್ದರು.ಮುಖಂಡ ಕೆಂಚಪ್ಪ ಬಿರಾದಾರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಸಂಗಣ್ಣ ಕುಂಬಾರ,ರವಿ ಜಗಲಿ,ರವೀಂದ್ರ ಬಿರಾದಾರ, ರೈತ ಸಂಘಟನೆಯ ಮುಖಂಡ ಸಂಗಣ್ಣ ಬಾಗೇವಾಡಿ ಸೇರಿದಂತೆ ರೈತ ಮಹಿಳೆಯರು ಪಾಲ್ಗೊಂಡಿದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ