ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಮುದ್ದೇಬಿಹಾಳ : ಮುಡಾ ಹಗರಣದ ತೂಗುಗತ್ತಿ ಯಾವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ತೂಗಾಡುತ್ತಿದೆಯೋ ಅಲ್ಲಿಂದಲೇ ಅವರಿಗೆ ಮತಿಭ್ರಮಣೆಯಾದಂತಾಗಿದ್ದು ವಕ್ಭ್ಬೋರ್ಡ್ ಹೆಸರಲ್ಲಿ ರೈತರ ಮೇಲೆ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತರು ವಕ್ಭ್ ಬೋರ್ಡ್ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಎರಡನೇ ದಿನದ ಹೋರಾಟದಲ್ಲಿ ಅವರು ಬೆಂಬಲ ಸೂಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಎರಡೇ ತಿಂಗಳಲ್ಲಿ ಶೇ.38 ರಷ್ಟು ವಕ್ಭ್ ಆಸ್ತಿ ಹೆಚ್ಚಳವಾಗಿದೆ. ಸಾರ್ವಜನಿಕರು, ಮಠಾಧೀಶರು, ಬಿಜೆಪಿ ಪಕ್ಷದಿಂದ ಹೋರಾಟ ತೀವ್ರಗೊಂಡಾಗ ಸಿಎಂ ರೈತರ ಪಹಣಿಗಳಲ್ಲಿನ ವಕ್ಭ್ ಬೋರ್ಡ ಪದ ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಆದರೂ ತಹÀಶೀಲ್ದಾರರು , ಡಿಸಿ ಮಲಗಿದ್ದಾರೆಯೇ ಸಿಎಂ ಆದೇಶಕ್ಕೆ ಬೆಲೆ ಇಲ್ಲವೇ ? ಸಿಎಂ ಆದೇಶ ಮಾಡಿದ್ದೇನೆ ಎಂದು ಹೇಳಿಕೆ ಕೊಟ್ಟರೂ ಅದಕ್ಕೆ ಸ್ಪಂದನೆ ಇಲ್ಲವಾಗಿದೆ.ಕಾಂಗ್ರೆಸ್ ಸರ್ಕಾರ ಜನವಿರೋಧಿ, ರೈತ ವಿರೋಧಿ ಸರ್ಕಾರ ಎಂದು ಹೇಳಿದರು.

ಕೇವಲ ಬಾಯಿ ಮಾತಿನ ಮೇಲೆ ನೋಟೀಸ್ ವಾಪಸ್ ಪಡೆದುಕೊಂಡಿದ್ದೇನೆ ಎಂದು ಹೇಳಿದರೆ ಸಾಲದು. ವಕ್ಭ್ ಬೋರ್ಡ್ ಎಂದು ಎಂಟ್ರಿ ಮಾಡಿದ್ದನ್ನು ತೆಗೆದು ಹಾಕಬೇಕು. ಒಂದು ಎಕರೆ ಜಮೀನು ವಕ್ಭ್ ಬೋರ್ಡ್ಗೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಗಂಗಾಧರ ನಾಡಗೌಡ , ಹೋರಾಟಗಾರ ನಾಗಲಿಂಗಯ್ಯ ಮಠ ಮಾತನಾಡಿ, ಸರ್ಕಾರದ ಕ್ರಮ ವಿರುದ್ಧ ಆಕ್ರೋಶ ಹೊರಹಾಕಿದರು. ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ 400 ಎಕರೆ ಜಮೀನುಗಳ ಮೇಲೆ ವಕ್ಭ್ ಬೋರ್ಡ್ ಹೆಸರು ಇರುವುದನ್ನು ತೆಗೆದು ಹಾಕಬೇಕು ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಶಾಸಕ ಅಪ್ಪಾಜಿ ಮೌನವೇಕೆ ?: ತಾಲ್ಲೂಕಿನ ರೈತರಿಗೆ ಅನ್ಯಾಯವಾಗುತ್ತಿದ್ದರೂ ಶಾಸಕರು ಏನು ಮಾಡುತ್ತಿದ್ದೀರಿ ? ರೈತರ ಆಸ್ತಿ ಲೂಟಿ ಹೊಡೆಯುವವರ ಪರವಾಗಿದ್ದೀರಾ ? ಎಂದು ಮಾಜಿ ಶಾಸಕ ನಡಹಳ್ಳಿ ಪ್ರಶ್ನಿಸಿದರು.ಸಿಎಂ ಹೇಳಿಕೆ ಕೊಟ್ಟಿದ್ದು, ಆ ಬಗ್ಗೆ ಶಾಸಕರು ಹೋರಾಟಗಾರರಿಗೆ ಮನವರಿಕೆ ಮಾಡಿಕೊಡಬೇಕಿತ್ತು.ಆದರೆ ಈವರೆಗೂ ಅವರಿಂದ ರೈತರಪರವಾಗಿ ಒಂದು ಹೇಳಿಕೆ ಇಲ್ಲ.ತಹಶೀಲ್ದಾರ್‌ಗೆ ತಿಳಿಸಿ ವಕ್ಭ್ ಬೋರ್ಡ ಕರ್ನಾಟಕ ಸರ್ಕಾರ ತಗೆದುಹಾಕಲು ತಿಳಿಸಬೇಕು ಎಂದು ಹರಿಹಾಯ್ದರು.ಮುಖಂಡ ಕೆಂಚಪ್ಪ ಬಿರಾದಾರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಸಂಗಣ್ಣ ಕುಂಬಾರ,ರವಿ ಜಗಲಿ,ರವೀಂದ್ರ ಬಿರಾದಾರ, ರೈತ ಸಂಘಟನೆಯ ಮುಖಂಡ ಸಂಗಣ್ಣ ಬಾಗೇವಾಡಿ ಸೇರಿದಂತೆ ರೈತ ಮಹಿಳೆಯರು ಪಾಲ್ಗೊಂಡಿದ್ದರು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ